Tuesday, February 25, 2025
Tuesday, February 25, 2025

ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ

ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ

Date:

ಕುಂದಾಪುರ: ಹಾಲಾಡಿಯ ಮಧೂರಿಯಲ್ಲಿ ಅಸಂಘಟಿತ ಹಾಗೂ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಭಾರತೀಯ ಮಜ್ದೂರ್ ಸಂಘ ಉಡುಪಿ ಜಿಲ್ಲೆ, ಮೈತ್ರಿ ಯುವಕ ಮಂಡಲ, ಸ್ವಾವಲಂಬಿ ಭಾರತ್ ಇದರ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಭಾರತೀಯ ಮಜ್ದೂರ್ ಸಂಘದ ಹಿರಿಯರಾದ ನಾರಾಯಣ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್ ಅವರು ಕಟ್ಟಡ ಕಾರ್ಮಿಕರಿಗೆ ಇರುವ ಸೌಲಭ್ಯಗಳು ನೋಂದಣಿ ಬಗ್ಗೆ ಹಾಗೂ ಅಸಂಘಟಿತ ಕಾರ್ಮಿಕರ ನೋಂದಣಿ ಇ- ಶ್ರಮಕಾರ್ಡ್ ಮಾಡಿಸುವುದರ ಬಗ್ಗೆ ಹಾಗೂ ಶ್ರಮಯೋಗಿ ಪೆನ್ಷನ್ ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಉಡುಪಿ ನಗರಸಭಾ ಸದಸ್ಯ ಸ್ವಾವಲಂಬಿ ಭಾರತ ಅಭಿಯಾನದ ಜಿಲ್ಲಾ ಪ್ರಮುಖರಾದ ವಿಜಯ್ ಕೊಡವೂರು ಭಾರತೀಯ ಮಜ್ದೂರ್ ಸಂಘದ ಅವಶ್ಯಕತೆ ಹಾಗೂ ಸ್ವಾವಲಂಬಿ ಭಾರತದ ಉದ್ದೇಶದ ಕುರಿತು ಮಾತನಾಡಿದರು.

ಭಾರತೀಯ ಮಜ್ದೂರ್ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ರತ್ನಾಕರ್ ದೇವಾಡಿಗ ಶುಭ ಹಾರೈಸಿದರು.

ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಮೈತ್ರಿ ಯುವಕ ಮಂಡಲದ ಅಧ್ಯಕ್ಷರಾದ ಗಣೇಶ ಮೊಗವೀರ ಹಾಗೂ ಹಾಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ದನ ಹಾಲಾಡಿ, ಸದಸ್ಯರಾದ ಗುರುಪ್ರಸಾದ್ ಶೆಟ್ಟಿ, ಗ್ರಾಮ ಒನ್ ನ ಪ್ರಮೋದ್ ಶೆಟ್ಟಿ ಉಪಸ್ಥಿತರಿದ್ದರು.

ಅಕ್ಷಯ ಅಚಾರ್ಯ ಸ್ವಾಗತಿಸಿ, ಮಧುಸೂಧನ್ ವಂದಿಸಿದರು. ಸುಧೀರ್‌ ಕಟ್ಟಿನಗುಂಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!