Home ಸುದ್ಧಿಗಳು ಪ್ರಾದೇಶಿಕ ಮಲೇರಿಯಾ, ಡೆಂಗ್ಯೂ ನಿರ್ಮೂಲನೆ ಮಾಹಿತಿ, ಕಿರು ನಾಟಕ ಪ್ರದರ್ಶನ

ಮಲೇರಿಯಾ, ಡೆಂಗ್ಯೂ ನಿರ್ಮೂಲನೆ ಮಾಹಿತಿ, ಕಿರು ನಾಟಕ ಪ್ರದರ್ಶನ

362
0

ಉಡುಪಿ: ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಇವರು ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಮುಂತಾದ ರೋಗಗಳ ಹರಡುವಿಕೆ, ನಿಯಂತ್ರಣ ಹಾಗೂ ಸೊಳ್ಳೆಯ ನಿರ್ಮೂಲನೆ ಕುರಿತು ಮಾಹಿತಿ ನೀಡಿದರು.

ನಿಲಯದ ವಿದ್ಯಾರ್ಥಿನಿಯರು ಸೊಳ್ಳೆಯ ಕುರಿತು ಕಿರು ನಾಟಕ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ನಿಲಯದ ಮೇಲ್ವಿಚಾರಕಿ ಸುಚಿತ್ರ, ಆರೋಗ್ಯ ಸಲಹೆಗಾರ ನಿತ್ಯಾನಂದ ಗೌಡ, ಆರೋಗ್ಯ ಇಲಾಖೆ ಹಾಗೂ ವಿದ್ಯಾರ್ಥಿನಿಲಯದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.