Monday, September 23, 2024
Monday, September 23, 2024

ಶಿಕ್ಷಣದಿಂದ ವಿದ್ಯಾರ್ಥಿಗಳ ಮೌಲ್ಯವರ್ಧನೆ: ಡಾ. ಉದಯಕುಮಾರ್ ಶೆಟ್ಟಿ

ಶಿಕ್ಷಣದಿಂದ ವಿದ್ಯಾರ್ಥಿಗಳ ಮೌಲ್ಯವರ್ಧನೆ: ಡಾ. ಉದಯಕುಮಾರ್ ಶೆಟ್ಟಿ

Date:

ಉಡುಪಿ: ಶಿಕ್ಷಣ ಕೇವಲ ಜ್ಞಾನ ನೀಡುವ ಉದ್ದೇಶವನ್ನು ಹೊಂದಿರದೆ ವಿದ್ಯಾರ್ಥಿಗಳಲ್ಲಿ ಮೌಲ್ಯವರ್ಧನೆ ಮಾಡುವ ಗುರಿಯನ್ನೂ ಹೊಂದಿದೆ. ಈ ಗುರಿಯನ್ನು ಸಾಕಾರಗೊಳಿಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ನಮ್ಮ ಮನದಾಳದಲ್ಲಿ ಸದಾ ಕಾಲ ನೆಲೆಯೂರುವ ಅತ್ಯಮೂಲ್ಯ ವ್ಯಕ್ತಿಗಳು. ಈ ಅಪೂರ್ವ ಕಾರ್ಯಕ್ರಮದಲ್ಲಿ ಭಾಗಿಯಾದ ಸಂತೋಷ ನನಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತರಾದ ಡಾ. ಉದಯ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಪಿ.ಕೆ.ಸದಾನಂದ ಶರ್ಮ ಹಾಗೂ ನಿವೃತ್ತ ಶಿಕ್ಷಕಿಯರಾದ ಮಹಾಲಕ್ಷ್ಮೀ ಮತ್ತು ಕಮಲಾಕ್ಷಿ ಎನ್ ಉಪಾಧ್ಯ ಇವರನ್ನು ಗೌರವಿಸಲಾಯಿತು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟಿಗಳಾದ ವಿದ್ಯಾವತಿ ಎಸ್ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಸ್ವಾಗತಿಸಿ, ಉಪಪ್ರಾಂಶುಪಾಲ ಸಂತೋಷ್ ವಂದಿಸಿದರು. ಹಿಂದಿ ಉಪನ್ಯಾಸಕರಾದ ಶಶಿಧರ್ ಯು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!