Sunday, July 26, 2026
Sunday, July 26, 2026

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Date:

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಂಘದ ಅಧ್ಯಕ್ಷರು ಹಾಗೂ 2020-21ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಎ.ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ರಾಜೇಶ್, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಆಡಳಿತ ಸಮಿತಿಯ ಸದಸ್ಯರಾದ ಶಿವದಾಸ್ ಪಿ., ಸುಧಾಕರ್ ಎ., ಕುಶಲ್ ಕುಮಾರ್ ಎ., ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ಮಹೇಂದ್ರ ಕೋಟ್ಯಾನ್, ಸುಧಾಕರ ಪೂಜಾರಿ, ಗುರುರಾಜ್ ಪೂಜಾರಿ, ಸತೀಶ್ ಜಿ.ಪೂಜಾರಿ, ಜಯಂತಿ ಹರೀಶ್, ವಿನಯ್ ಕುಮಾರ್, ವಿನೋದ್ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!