Friday, September 20, 2024
Friday, September 20, 2024

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಶ್ರೀಗಳ ಭೇಟಿ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಶ್ರೀಗಳ ಭೇಟಿ

Date:

ಉಡುಪಿ: ಶ್ರೀ ಸಂಸ್ಥಾನ ಗೋಕರ್ಣ ಪಾರ್ತಗಾಳಿ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಪೀಠಾಧಿಪತಿಗಳಾದ ಬಳಿಕ ಪ್ರಪ್ರಥಮ ಬಾರಿಗೆ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಇಂದು ಸಂಜೆ (ಸೆಪ್ಟೆಂಬರ್ 18) ಭೇಟಿ ನೀಡಲಿದ್ದಾರೆ.

ಸಂಜೆ 5:30ಕ್ಕೆ ಸರಿಯಾಗಿ ಐಡಿಯಲ್ ಸರ್ಕಲ್ ನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಚಂಡೆ ವಾದನ, ವೇದ ಘೋಷಗಳೊಂದಿಗೆ ಶ್ರೀ ದೇವಳಕ್ಕೆ ವೈಭವೊಪೇತವಾಗಿ ಸ್ವಾಮೀಜಿಯವರನ್ನು ಬರಮಾಡಿಕೊಳ್ಳಲಾಗುವುದು.

ಬಳಿಕ ಶ್ರೀ ದೇವರ ಭೇಟಿ, ಶ್ರೀ ಭಾಗವತ ಸಪ್ತಾಹದ ವೇದಿಕೆಗೆ ಆಗಮನ, ಶ್ರೀಗಳವರಿಂದ ಶ್ರೀ ಭಾಗವತ ಗ್ರಂಥಕ್ಕೆ ಮಂಗಳಾರತಿ, ಹತ್ತು ಸಮಸ್ತರಿಂದ ಪಾದಪೂಜೆ ಮಾಲಾರ್ಪಣೆ, ಭಾಗವತ ಸಪ್ತಾಹದ ಸೇವಾದಾರರಾದ ಜಗದೀಶ್ ಪೈ ಕುಟುಂಬದವರಿಂದ ಶ್ರೀಗಳಿಗೆ ಪಾದ ಪೂಜೆ.

ಶ್ರೀ ಭಾಗವತ ಸಪ್ತಾಹ ಪ್ರವಚನವನ್ನು ಮಾಡುತ್ತಿರುವ ವಿದ್ವಾಂಸರಾದ ವಿ. ಅನಂತ ಕೃಷ್ಣಾಚಾರ್ಯ ಇವರಿಗೆ ಶ್ರೀಗಳಿಂದ ಫಲ ಮಂತ್ರಾಕ್ಷತೆಯೊಂದಿಗೆ ಸನ್ಮಾನ. ಹತ್ತು ಸಮಸ್ತರು, ವೈದಿಕರು ಮತ್ತು ಸಮಾಜ ಬಾಂಧವರಿಗೆ ಶ್ರೀಗಳಿಂದ ಫಲ ಮಂತ್ರಾಕ್ಷತೆ.

ಕಾರ್ಯಕ್ರಮದ ನಂತರ ಶ್ರೀಗಳವರನ್ನು ಕುಮಟಾ ಮೊಕ್ಕಾಂಗೆ ಬೀಳ್ಕೊಡಲಾಗುವುದು. ಸಮಾಜ ಬಾಂಧವರು 15 ನಿಮಿಷ ಮುಂಚಿತವಾಗಿ ಸೇರಬೇಕು ಮತ್ತು ಪಾದ ನಡಿಗೆಯಲ್ಲಿ ಭಜನಾ ಸಂಕೀರ್ತನೆಗೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!