Tuesday, February 25, 2025
Tuesday, February 25, 2025

ವಿದ್ಯುತ್ ಮಾರ್ಗದಲ್ಲಿ ಎಚ್ಚರ ವಹಿಸಿ

ವಿದ್ಯುತ್ ಮಾರ್ಗದಲ್ಲಿ ಎಚ್ಚರ ವಹಿಸಿ

Date:

ಉಡುಪಿ: ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು.

ಆದುದರಿಂದ ಕೊಲ್ಲೂರು ಹೊಸ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗವು ಹಾದುಹೋಗುವ ಹೇರೂರು, ನಾವುಂದ, ಉಳ್ಳೂರು-11, ಉಪ್ರಳ್ಳಿ, ಕಂಬದಕೋಣೆ, ಶೇಡಿಗುಡ್ಡೆ, ಹೇರಂಜಾಲು, ಕಾಲ್ತೋಡು, ಬಲಗೋಣ, ಅರೆಶಿರೂರು, ಎಲ್ಲೂರು, ಹಾಲ್ಕಲ್, ಗೋಳಿಹೊಳೆ ಗ್ರಾಮಗಳ ಪ್ರದೇಶಗಳಲ್ಲಿ ವಾಸಿಸುವ ಜನರು ಹಾಗೂ ಸ್ಥಳೀಯರು ಸಂಬಂಧಪಟ್ಟ ಮೆಸ್ಕಾಂ ಕಛೇರಿಯ ಗಮನಕ್ಕೆ ತರದೇ ಮಾರ್ಗದ ಹಾದಿಯಲ್ಲಿ ಯಾವುದೇ ಮಣ್ಣು ಅಗೆತ, ಬೆಂಕಿ ಹಚ್ಚುವಿಕೆ, ಕಂಬ ಹತ್ತುವುದು, ಕಂಬಗಳನ್ನು ಬಳಸಿ ಇತರ ಚಟುವಟಿಕೆಗಳನ್ನು ನಡೆಸುವುದು ಇತ್ಯಾದಿ ನಿರ್ಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಬಾರದಾಗಿ ಈ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಸೂಚನೆ/ನಿರ್ದೇಶನಗಳನ್ನು ಕಡೆಗಣಿಸಿ, ಈ ಪ್ರದೇಶಗಳಲ್ಲಿ ಯಾವುದೇ ನಿರ್ಬಂಧಿತ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಆಗಬಹುದಾದ ಕಷ್ಟ-ನಷ್ಟಗಳಿಗೆ ಸಂಬಂಧಿಸಿದವರೇ ಜವಾಬ್ದಾರರಾಗಿರುತ್ತಾರೆ ಮತ್ತು ಇದರಿಂದ ಆಗಬಹುದಾದ ವಿದ್ಯುತ್/ಇತರೇ ಅವಘಡಗಳಿಗೆ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ಜವಾಬ್ದಾರಿಯಾಗಿರುವುದಿಲ್ಲ, ಅದ್ದರಿಂದ ಸಾರ್ವಜನಿಕರು ಗಮನಿಸಿ, ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!