Friday, September 20, 2024
Friday, September 20, 2024

ವಿದ್ಯುತ್ ಮಾರ್ಗದಲ್ಲಿ ಎಚ್ಚರ ವಹಿಸಿ

ವಿದ್ಯುತ್ ಮಾರ್ಗದಲ್ಲಿ ಎಚ್ಚರ ವಹಿಸಿ

Date:

ಉಡುಪಿ: ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು.

ಆದುದರಿಂದ ಕೊಲ್ಲೂರು ಹೊಸ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗವು ಹಾದುಹೋಗುವ ಹೇರೂರು, ನಾವುಂದ, ಉಳ್ಳೂರು-11, ಉಪ್ರಳ್ಳಿ, ಕಂಬದಕೋಣೆ, ಶೇಡಿಗುಡ್ಡೆ, ಹೇರಂಜಾಲು, ಕಾಲ್ತೋಡು, ಬಲಗೋಣ, ಅರೆಶಿರೂರು, ಎಲ್ಲೂರು, ಹಾಲ್ಕಲ್, ಗೋಳಿಹೊಳೆ ಗ್ರಾಮಗಳ ಪ್ರದೇಶಗಳಲ್ಲಿ ವಾಸಿಸುವ ಜನರು ಹಾಗೂ ಸ್ಥಳೀಯರು ಸಂಬಂಧಪಟ್ಟ ಮೆಸ್ಕಾಂ ಕಛೇರಿಯ ಗಮನಕ್ಕೆ ತರದೇ ಮಾರ್ಗದ ಹಾದಿಯಲ್ಲಿ ಯಾವುದೇ ಮಣ್ಣು ಅಗೆತ, ಬೆಂಕಿ ಹಚ್ಚುವಿಕೆ, ಕಂಬ ಹತ್ತುವುದು, ಕಂಬಗಳನ್ನು ಬಳಸಿ ಇತರ ಚಟುವಟಿಕೆಗಳನ್ನು ನಡೆಸುವುದು ಇತ್ಯಾದಿ ನಿರ್ಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಬಾರದಾಗಿ ಈ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಸೂಚನೆ/ನಿರ್ದೇಶನಗಳನ್ನು ಕಡೆಗಣಿಸಿ, ಈ ಪ್ರದೇಶಗಳಲ್ಲಿ ಯಾವುದೇ ನಿರ್ಬಂಧಿತ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಆಗಬಹುದಾದ ಕಷ್ಟ-ನಷ್ಟಗಳಿಗೆ ಸಂಬಂಧಿಸಿದವರೇ ಜವಾಬ್ದಾರರಾಗಿರುತ್ತಾರೆ ಮತ್ತು ಇದರಿಂದ ಆಗಬಹುದಾದ ವಿದ್ಯುತ್/ಇತರೇ ಅವಘಡಗಳಿಗೆ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ಜವಾಬ್ದಾರಿಯಾಗಿರುವುದಿಲ್ಲ, ಅದ್ದರಿಂದ ಸಾರ್ವಜನಿಕರು ಗಮನಿಸಿ, ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!