Thursday, September 19, 2024
Thursday, September 19, 2024

ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇದ್ದಲ್ಲಿ ಜೀವನ ಸನ್ಮಾರ್ಗದಲ್ಲಿರುತ್ತದೆ: ಡಾ. ಸುರೇಶ್ ರೈ

ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇದ್ದಲ್ಲಿ ಜೀವನ ಸನ್ಮಾರ್ಗದಲ್ಲಿರುತ್ತದೆ: ಡಾ. ಸುರೇಶ್ ರೈ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ. ಹಾಗೂ ಎನ್.ಎಸ್.ಎಸ್. ಮತ್ತು ಸರಕಾರಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಯುವ ಸಬಲೀಕರಣ ಪರಿಕಲ್ಪನೆಯ ಉನ್ನತ ಶಿಕ್ಷಣ, ಸಂವಹನ ಕೌಶಲಗಳು–ಜೀವನ ಕಲೆ ಹಾಗೂ ಒತ್ತಡ ನಿರ್ವಹಣೆ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರ ಉದ್ಘಾಟಿಸಿದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಜ್ಞಾನವೊಂದಿದ್ದರೆ ಸಾಲದು, ಜ್ಞಾನದ ಬಳಕೆಗೆ ಅವಶ್ಯಕವಾದ ಸಂವಹನ ಕೌಶಲಗಳು, ಬದುಕಿನ ಸವಾಲುಗಳನ್ನು ಎದುರಿಸುವ ಕೌಶಲಗಳು ಹಾಗೂ ಒತ್ತಡ ನಿರ್ವಹಣೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿ ಶುಭ ಹಾರೈಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ವ್ಯಕ್ತಿಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಣದ ಸಂದರ್ಭದಲ್ಲಿ ಪದವಿಪೂರ್ವ ಹಂತದ ಒಂದು ವರ್ಗಾವಣೆ ಹಂತವಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇದ್ದಲ್ಲಿ ಜೀವನ ಸನ್ಮಾರ್ಗದಲ್ಲಿರುತ್ತದೆ ಎಂದರು.

ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ಎನ್.ಎಸ್.ಎಸ್. ಯೋಜನಾಧಿಕಾರಿ ಸುಷ್ಮಾ ಟಿ., ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಪ್ಲೇಸ್‌ಮೆಂಟ್ ಸೆಲ್ ಸಂಚಾಲಕ ಉಮೇಶ್ ಪೈ, ತೆಂಕನಿಡಿಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಾಸು ಮೊಗೇರ್, ಪ್ರಮೀಳಾ, ಛಾಯಾ, ಜಯಶ್ರೀ, ರೀನಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಪ್ರಶಾಂತ್ ಎನ್., ಒತ್ತಡ ನಿರ್ವಹಣೆ ಕುರಿತಾಗಿ ಡಾ. ಮೇವಿ ಮಿರಾಂದ, ಜೀವನಕಲೆ ಕುರಿತಾಗಿ ಯುವ ಸ್ಪಂದನದ ತರಬೇತುದಾರರಾದ ಜ್ಯೋತಿ ಪ್ರಶಾಂತ್ ಹಾಗೂ ಸಂವಹನ ಕಲೆಯ ಕುರಿತಾಗಿ ಡಾ. ಗೀತಾ ಎನ್ ತರಬೇತಿ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!