Tuesday, February 25, 2025
Tuesday, February 25, 2025

ವೃತ್ತಿಯನ್ನು ಪ್ರೀತಿಸಿ: ಡಾ. ಹರೀಶ್ಚಂದ್ರ

ವೃತ್ತಿಯನ್ನು ಪ್ರೀತಿಸಿ: ಡಾ. ಹರೀಶ್ಚಂದ್ರ

Date:

ಉಡುಪಿ: ವೃತ್ತಿಯನ್ನು ಪ್ರೀತಿಸಿ, ನಿಷ್ಠೆಯಿಂದ ಮತ್ತು ಪ್ರಾಮಾಣಿಕತೆಯಿಂದ ತನ್ನನ್ನು ಸಮರ್ಪಿಸಿಕೊಂಡಾಗ ವೃತ್ತಿ ಗೌರವವೂ ಮತ್ತು ವ್ಯಕ್ತಿ ಗೌರವವೂ ಹೆಚ್ಚಾಗುತ್ತದೆ ಎಂದು ಗಾಂಧಿ ಆಸ್ಪತ್ರೆಯ ಎಂ.ಡಿ ಡಾ. ಹರೀಶ್ಚಂದ್ರ ಹೇಳಿದರು.

ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ ಉಡುಪಿ ವಲಯ ಹಮ್ಮಿಕೊಂಡ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇನ್ನೋರ್ವ ಅತಿಥಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಮಾತನಾಡುತ್ತಾ, ಪ್ರವಾಸೋದ್ಯಮಕ್ಕೂ ಛಾಯಾಚಿತ್ರಗ್ರಾಹಕರಿಗೂ ಅಮಿನಾಭಾವ ಸಂಬಂಧ. ಛಾಯಾಗ್ರಹಣದ ಮೂಲಕ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು.

ಬದುಕು ಬಂಗಾರ ಎಂಬ ಕಿರು ಚಿತ್ರದ ಟ್ರೈಲರ್ ಬಿಡುಗಡೆಗೊಂಡಿತು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಉಡುಪಿಯಲ್ಲಿ ನಡೆದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಿತು. ಶಿಕ್ಷಕಿಯರಾದ ಉಡುಪಿ ವಲಯದ ಜೀವಿತ ವಾಮನ್, ಪ್ರವೀಣ್ ಆನಂದ್, ನಯನ ಉದಯ್, ರಾಧಿಕಾ ದಿವಾಕರ್ ಹಾಗೂ ಕಾಪು ವಲಯದ ನಿಯತ ಸಚಿನ್, ಸವಿತಾ ಎಸ್ ಎರ್ಮಾಳ್, ಶಿಲ್ಪಾ ಶರಣ್ ರವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಮೂಡುಬಿದ್ರೆ ವಲಯಾಧ್ಯಕ್ಷ ಸುನಿಲ್ ಕೋಟ್ಯಾನ್, ಯು ಸುಧಾಕರ ಶೆಣೈ, ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ ಮಾರುಕಟ್ಟೆ ಮುಖ್ಯಸ್ಥ ರಾಘವೇಂದ್ರ ನಾಯಕ್, ಪ್ರವೀಣ್ ಕೊರೆಯ ಉಪಸ್ಥಿತರಿದ್ದರು. ದಿವಾಕರ್ ಕಟೀಲ್ ಪ್ರಾರ್ಥಿಸಿದರು. ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ವಂದಿಸಿದರು. ರಾಘವೇಂದ್ರ ಶೇರಿಗಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!