Friday, September 20, 2024
Friday, September 20, 2024

ವೃತ್ತಿಯನ್ನು ಪ್ರೀತಿಸಿ: ಡಾ. ಹರೀಶ್ಚಂದ್ರ

ವೃತ್ತಿಯನ್ನು ಪ್ರೀತಿಸಿ: ಡಾ. ಹರೀಶ್ಚಂದ್ರ

Date:

ಉಡುಪಿ: ವೃತ್ತಿಯನ್ನು ಪ್ರೀತಿಸಿ, ನಿಷ್ಠೆಯಿಂದ ಮತ್ತು ಪ್ರಾಮಾಣಿಕತೆಯಿಂದ ತನ್ನನ್ನು ಸಮರ್ಪಿಸಿಕೊಂಡಾಗ ವೃತ್ತಿ ಗೌರವವೂ ಮತ್ತು ವ್ಯಕ್ತಿ ಗೌರವವೂ ಹೆಚ್ಚಾಗುತ್ತದೆ ಎಂದು ಗಾಂಧಿ ಆಸ್ಪತ್ರೆಯ ಎಂ.ಡಿ ಡಾ. ಹರೀಶ್ಚಂದ್ರ ಹೇಳಿದರು.

ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ ಉಡುಪಿ ವಲಯ ಹಮ್ಮಿಕೊಂಡ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇನ್ನೋರ್ವ ಅತಿಥಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಮಾತನಾಡುತ್ತಾ, ಪ್ರವಾಸೋದ್ಯಮಕ್ಕೂ ಛಾಯಾಚಿತ್ರಗ್ರಾಹಕರಿಗೂ ಅಮಿನಾಭಾವ ಸಂಬಂಧ. ಛಾಯಾಗ್ರಹಣದ ಮೂಲಕ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು.

ಬದುಕು ಬಂಗಾರ ಎಂಬ ಕಿರು ಚಿತ್ರದ ಟ್ರೈಲರ್ ಬಿಡುಗಡೆಗೊಂಡಿತು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಉಡುಪಿಯಲ್ಲಿ ನಡೆದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಿತು. ಶಿಕ್ಷಕಿಯರಾದ ಉಡುಪಿ ವಲಯದ ಜೀವಿತ ವಾಮನ್, ಪ್ರವೀಣ್ ಆನಂದ್, ನಯನ ಉದಯ್, ರಾಧಿಕಾ ದಿವಾಕರ್ ಹಾಗೂ ಕಾಪು ವಲಯದ ನಿಯತ ಸಚಿನ್, ಸವಿತಾ ಎಸ್ ಎರ್ಮಾಳ್, ಶಿಲ್ಪಾ ಶರಣ್ ರವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಮೂಡುಬಿದ್ರೆ ವಲಯಾಧ್ಯಕ್ಷ ಸುನಿಲ್ ಕೋಟ್ಯಾನ್, ಯು ಸುಧಾಕರ ಶೆಣೈ, ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ ಮಾರುಕಟ್ಟೆ ಮುಖ್ಯಸ್ಥ ರಾಘವೇಂದ್ರ ನಾಯಕ್, ಪ್ರವೀಣ್ ಕೊರೆಯ ಉಪಸ್ಥಿತರಿದ್ದರು. ದಿವಾಕರ್ ಕಟೀಲ್ ಪ್ರಾರ್ಥಿಸಿದರು. ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ವಂದಿಸಿದರು. ರಾಘವೇಂದ್ರ ಶೇರಿಗಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!