Friday, September 20, 2024
Friday, September 20, 2024

ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

Date:

ಕಾರ್ಕಳ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ.

ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ. ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ.

ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ ಎಂದು ಪ್ರೊ.ಟಿ.ಮುರುಗೇಶಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!