Saturday, September 21, 2024
Saturday, September 21, 2024

ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ

ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ

Date:

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳು ಜಾಸ್ತಿಯಾಗುತ್ತಿವೆ. ಮನುಷ್ಯ ಮತ್ತು ಪ್ರಕೃತಿಯ ಒಡನಾಟದಲ್ಲಿ ಸಾಮರಸ್ಯ ತಪ್ಪಿರುವುದೇ ಇದಕ್ಕೆ ಕಾರಣ. ಅತಿವೃಷ್ಟಿ, ನೆರೆ ಹಾವಳಿ, ಭೂಕುಸಿತ, ಮೇಘಸ್ಪೋಟ ಇತ್ಯಾದಿಗಳು ಒಂದಿಲ್ಲೊಂಡೆದೆ ದಿನನಿತ್ಯ ಎಂಬಂತಾಗಿದೆ.

ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಅಸಾಧ್ಯವಾದರೂ, ಅವುಗಳ ಬಗ್ಗೆ ಅರಿವು ಹೊಂದಿದ್ದರೆ, ಜೀವ ಮತ್ತು ಆಸ್ತಿ ಹಾನಿಯನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ವಿವಿಧ ಇಲಾಖೆಗಳಿದ್ದರೂ, ಸಾರ್ವಜನಿಕರು ಕೈ ಜೋಡಿಸದೆ ವಿಪತ್ತು ತಪ್ಪಿಸಲು ಅಸಾಧ್ಯ.

ಆದರೆ, ಉಡುಪಿ ಜಿಲ್ಲೆಯಲ್ಲಿ ಇಂತಹ ಎಲ್ಲ ವಿಷಮ ಪರಿಸ್ಥಿತಿಗಳಲ್ಲೂ ಇಲಾಖೆಗಳೊಂದಿಗೆ ಸಹಕರಿಸಿ, ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗುವ ಉತ್ಸಾಹಿ ಯುವ ಪಡೆಯೇ ಇದೆ. ವಿವಿಧ ಸಂಘ – ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ರಕ್ಷಣಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ತರಬೇತಿಗಳನ್ನು ನೀಡುವುದರಿಂದ ಸಾಮಾಜಿಕ ಸುರಕ್ಷೆಗೆ ದೊಡ್ಡ ಕೊಡುಗೆ ಸಲ್ಲಿಸಿದಂತಾಗುತ್ತದೆ ಎಂದು ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ಹೇಳಿದರು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್, ದ.ಕ ಮತ್ತು ಉಡುಪಿ ಜಿಲ್ಲೆ ಹಾಗೂ ಕುಂದಾಪುರ – ಬೈಂದೂರು ವಲಯ ಇವರ ನೇತೃತ್ವದಲ್ಲಿ ಬೀಜಾಡಿಯ ಐಶ್ವರ್ಯ ಮೀಡಿಯಾ ಮತ್ತು ಸ್ಟುಡಿಯೋ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ, ಅಗ್ನಿಶಾಮಕ ಠಾಣೆ ಕುಂದಾಪುರ, ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ನಡೆದ ವಿಶ್ವ ಪ್ರಕೃತಿ ವಿಕೋಪ ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಅಂಶಗಳು ಇಂದು ಶಿಕ್ಷಣದಲ್ಲಿಲ್ಲ. ಶಿಕ್ಷಣ ಮತ್ತು ಸಂಸ್ಕಾರ ದೂರವಾಗಿವೆ. ಇಂದು ಶಿಕ್ಷಣ ಮತ್ತು ಶ್ರೇಯಾಂಕ ಎಂದಾಗಿದೆ. ಹೀಗೆ ಪ್ರತಿಭೆಯನ್ನು ಮಾತ್ರ ಪುರಸ್ಕರಿಸಿ, ಸಮಾಜವನ್ನು ಬದಿಗೆ ಸರಿಸಿದ್ದರಿಂದ, ಪ್ರಾಕೃತಿಕ ವಿಕೋಪಗಳು ಮತ್ತಿತರ ವಿಷಮ ಪರಿಸ್ಥಿತಿಗಳಲ್ಲಿ ತಮ್ಮ ಜೀವವನ್ನೂ ಲೆಕ್ಕಿಸದೆ ಇತರರ ಬಗ್ಗೆ ಕಾಳಜಿ ವಹಿಸುವ ಪೊಲೀಸರು, ಅಗ್ನಿಶಾಮಕರು, ಸ್ವಯಂ ಸೇವಕರು ಇತರರ ಬಗ್ಗೆ ಸುಶಿಕ್ಷಿತರೂ ಗೌರವಾದರ ತೋರಲು ಮರೆಯುವಂತಾಗಿದೆ. ಆದ್ದರಿಂದಲೇ ಇಂತಹ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕಾಲೇಜಿನಲ್ಲಿ ನಡೆಸಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಫೋಟೋಗ್ರಾಫರ್ಸ್ ಅಸೋಸಿಯೇಷನ್ ನವರ ಕಾರ್ಯ ಶ್ಲಾಘಿಸಿದರು.

ಎಸ್.ಕೆ.ಪಿ.ಎ ಕುಂದಾಪುರ-ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಬಾಬು ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿಗಳಾದ ಸಂತೋಷ್ ನಾಯ್ಕ್, ಸುಚಿತ್ರ, ಎಸ್.ಕೆ.ಪಿ.ಎ ಕುಂದಾಪುರ-ಬೈಂದೂರು ವಲಯದ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ, ಪ್ರಧಾನ ಕಾರ್ಯದರ್ಶಿ ಸುರೇಶ್, ನಿಕಟಪೂರ್ವ ಅಧ್ಯಕ್ಷ ರಾಜ ಮಠದಬೆಟ್ಟು, ಎಸ್ ಕೆ ಪಿ ಎ ಸೊಸೈಟಿ ನಿರ್ದೇಶಕ ಗಣೇಶ್ ಬೆನಕ, ಉಪಾಧ್ಯಕ್ಷ ಶೀನ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ಆಪತ್ಬಾಂಧವರಾದ ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ಬಾಬು ಶೆಟ್ಟಿ, ಪ್ರದೀಪ್ ಜಿ. ನಾಯ್ಕ್ ಮತ್ತು ಶೌರ್ಯ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಕೋಟೇಶ್ವರ-ಕಾಳಾವರ ಘಟಕದ ಸಂಯೋಜಕ ರಾಜಶೇಖರ್ ಕುಂದರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಗ್ನಿ ಅವಘಡ, ಪ್ರಾಕೃತಿಕ ವಿಕೋಪಗಳ ಸಂದರ್ಭಗಳನ್ನು ನಿರ್ವಹಿಸುವ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಗಳೊಂದಿಗೆ ಮಾಹಿತಿ ನೀಡಲಾಯಿತು. ಐಶ್ವರ್ಯ ಮೀಡಿಯಾದ ಮುಖ್ಯಸ್ಥ, ಪತ್ರಕರ್ತ ಗಣೇಶ್ ಐಶ್ವರ್ಯ ಬೀಜಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನಾಗರಾಜ ಯು ಸನ್ಮಾನ ಪತ್ರ ವಾಚಿಸಿದರು. ಸಂತೋಷ್ ನಾಯ್ಕ್ ವಂದಿಸಿದರು. ಉಪನ್ಯಾಸಕ ವೆಂಕಟರಾಮ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!