ಉಡುಪಿ: ಬಹುಮುಖ ಪ್ರತಿಭೆಯ ಸಮಾಜ ಸೇವಕಿ ಹೋಂ ಡಾಕ್ಟರ್ ಫೌಂಡೇಶನ್ ಸಕ್ರಿಯ ಸದಸ್ಯೆ ನೈನಾ ನಾಗೇಂದ್ರ ನಾಯಕ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೇಸಿಐ ವಲಯ 15 ರ ವತಿಯಿಂದ ವಲಯ ವ್ಯವಹಾರ ಸಮ್ಮೇಳನ ಸಂಚಲನ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ರವರು ಪ್ರಶಸ್ತಿ ಪ್ರಧಾನ ಮಾಡಿದರು.
ಬೆಳ್ಮಣ್ಣಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಲಯ ವ್ಯವಹಾರ ನಿರ್ದೇಶಕ ಸರ್ವಜ್ಞ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ವಲಯ ಪ್ರಥಮ ಮಹಿಳೆ ಮರಿಯಾ ರಾಡ್ರಿಗಸ್, ಉಪಾಧ್ಯಕ್ಷ ರವಿಚಂದ್ರ ಪಾಟಾಳಿ, ಉಡುಪಿ ಸಿಟಿ ಘಟಕ ಅಧ್ಯಕ್ಷ ಡಾ. ವಿಜಯ್ ನೆಗಳೂರು ಮತ್ತು ವಲಯಾಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™