Thursday, July 23, 2026
Thursday, July 23, 2026

ಅಂಬೇಡ್ಕರ್ ಓದು ಕಾರ್ಯಕ್ರಮ

ಅಂಬೇಡ್ಕರ್ ಓದು ಕಾರ್ಯಕ್ರಮ

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇವರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಚಿಂತಕ ನಾರಾಯಣ ಮಣೂರು ಮಾತನಾಡಿ, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದ ಪರಿಕಲ್ಪನೆಯ ಕನಸು ಕಂಡವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಮೀಸಲಾತಿ ಮಾತ್ರವಲ್ಲದೆ ಅನೇಕ ಸೌಲಭ್ಯಗಳಿಗೆ ಕಾರಣಿಭೂತವಾದ ಕಾನೂನು ಜಾರಿಯಾಗಲು ಹಾಗೂ ಆರ್ಥಿಕ ಅಭಿವೃದ್ಧಿ, ನೀರಾವರಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಸಕಾರಾತ್ಮಕ ಬದಲಾವಣೆಗಳಿಗೆ ಅಂಬೇಡ್ಕರ್ ರವರು ಶ್ರಮಿಸಿದ ಬಗೆಯನ್ನು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಘಟಕದ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಡಾ. ರಘು ನಾಯ್ಕ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ಸಂಚಾಲಕ ಡಾ. ಸಣ್ಣಚಿಕ್ಕಯ್ಯ, ಕನ್ನಡ ವಿಭಾಗ ಮುಖ್ಯಸ್ಥ ನಾಗರಾಜ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪುಸ್ತಕ, ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಎಚ್ ಜೆ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!