Sunday, February 23, 2025
Sunday, February 23, 2025

ಕಾಪು- ವಿಕಲಚೇತನರಿಗೆ ಪರಿಕರ ವಿತರಣೆ

ಕಾಪು- ವಿಕಲಚೇತನರಿಗೆ ಪರಿಕರ ವಿತರಣೆ

Date:

ಕಾಪು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರಭದ್ರ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯಬೇಕು. ತನ್ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಕಾರ್ಯ ಸ್ತುತ್ಯರ್ಹ ಎಂದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣಮೂರ್ತಿ ಮಾತನಾಡಿ, ಇದೊಂದು ಮಾದರಿ ಕಾರ್ಯಕ್ರಮ. ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ, ಇದು ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.

15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು. ಡಾ. ನೆಲ್ಲಿಷಾ, ಲಾವಣ್ಯ, ಕೆ.ಎಸ್.ಎಸ್.ಎ.ಪಿ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಶ್ರುತಿ ಎಂಟರ್ಪ್ರೈಸಸ್ ಮಾಲಕ ಸುರೇಶ್ ಮತ್ತು ಎನ್.ಎಸ್.ಸಿ.ಡಿ.ಎಫ್ ಸದಸ್ಯೆ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!