Saturday, January 17, 2026
Saturday, January 17, 2026

ಕಾಪು- ವಿಕಲಚೇತನರಿಗೆ ಪರಿಕರ ವಿತರಣೆ

ಕಾಪು- ವಿಕಲಚೇತನರಿಗೆ ಪರಿಕರ ವಿತರಣೆ

Date:

ಕಾಪು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಶ್ರೀ ಅಧೀಶಕ್ತಿ ವೀರಭದ್ರ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಪ್ರತಿ ಕ್ಷೇತ್ರಗಳಲ್ಲಿಯೂ ನಡೆಯಬೇಕು. ತನ್ಮೂಲಕ ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಕಾಣಬಹುದು ಎಂದ ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಕಾರ್ಯ ಸ್ತುತ್ಯರ್ಹ ಎಂದರು.

ಮುಖ್ಯ ಅತಿಥಿಗಳಾಗಿದ್ದ ಕವಿ, ಲೇಖಕ ಕೆ.ವಿ.ಲಕ್ಷ್ಮಣಮೂರ್ತಿ ಮಾತನಾಡಿ, ಇದೊಂದು ಮಾದರಿ ಕಾರ್ಯಕ್ರಮ. ಇದರಿಂದಾಗಿ ಅನೇಕರು ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ, ಇದು ವಿಶೇಷ ಚೇತನರ ಬಾಳಿನಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮ ಎಂದು ಹೇಳಿದರು.

15 ಹೊಲಿಗೆ ಯಂತ್ರ, 3 ಗಾಲಿ ಕುರ್ಚಿ ಮತ್ತು 1 ಶ್ರವಣ ಸಾಧನ ವಿಶೇಷ ಚೇತನರಿಗೆ ಹಸ್ತಾಂತರಿಸಲಾಯಿತು. ಡಾ. ನೆಲ್ಲಿಷಾ, ಲಾವಣ್ಯ, ಕೆ.ಎಸ್.ಎಸ್.ಎ.ಪಿ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಶ್ರುತಿ ಎಂಟರ್ಪ್ರೈಸಸ್ ಮಾಲಕ ಸುರೇಶ್ ಮತ್ತು ಎನ್.ಎಸ್.ಸಿ.ಡಿ.ಎಫ್ ಸದಸ್ಯೆ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!