Saturday, January 17, 2026
Saturday, January 17, 2026

ಹಡಿಲು ಭೂಮಿ ಕೃಷಿ ಗದ್ದೆಗಳ ಕಳೆ ತೆಗೆಯುವ ಕಾರ್ಯ

ಹಡಿಲು ಭೂಮಿ ಕೃಷಿ ಗದ್ದೆಗಳ ಕಳೆ ತೆಗೆಯುವ ಕಾರ್ಯ

Date:

ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದ್ದು ಕರಂಬಳ್ಳಿ ವಾರ್ಡಿನ ಭಾಗದಲ್ಲಿ ಹಡಿಲು ಭೂಮಿ ಕೃಷಿ ಮಾಡಲಾದ ಗದ್ದೆಗಳಲ್ಲಿ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಸಹಯೋಗದೊಂದಿಗೆ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಈ ಕಾರ್ಯದಲ್ಲಿ ತೊಡಗಿಸಿಕೊಂಡ ಉಭಯ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಸುರೇಶ್ ರೈ, ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಸುಷ್ಮಾ ಟಿ., ಡಾ. ಮಹೇಶ್ ಕುಮಾರ್ ಕೆ.ಇ., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಟ್ರಸ್ಟಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕುಮಾರ್, ಕೇದಾರೋತ್ಥಾನ ಟ್ರಸ್ಟ್ ಕಾರ್ಯಕರ್ತ ರಿಕೇಶ್ ಕಡೆಕಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!