Sunday, September 22, 2024
Sunday, September 22, 2024

ಜೇನು ಕೃಷಿ ಸುಸ್ಥಿರ ಜೀವನೋಪಾಯಕ್ಕೆ ದಾರಿ

ಜೇನು ಕೃಷಿ ಸುಸ್ಥಿರ ಜೀವನೋಪಾಯಕ್ಕೆ ದಾರಿ

Date:

ಉಡುಪಿ: ಮಾರುಕಟ್ಟೆಯಲ್ಲಿ ಜೇನಿಗೆ ಸಾಕಷ್ಟು ಬೇಡಿಕೆ ಇದ್ದು, ವಿಶೇಷವಾಗಿ ಕಲಬೆರಕೆ ಇಲ್ಲದ ಉತ್ತಮ ಗುಣಮಟ್ಟದ ಉತ್ಪನ್ನವನ್ನು ಪೂರೈಸಿದಲ್ಲಿ ಖಂಡಿತವಾಗಿಯೂ ಜೇನು ಕೃಷಿ ಸುಸ್ಥಿರ ಜೀವನೋಪಾಯಕ್ಕೆ ದಾರಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಹೇಳಿದರು.

ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ವತಿಯಿಂದ ಎನ್.ಆರ್.ಎಲ್.ಎಂ ಪ್ರಾಯೋಜಕತ್ವದಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಶುಭ ಹಾರೈಸಿದರು.

ಜೇನು ಕೃಷಿಯಿಂದ ಸಂಗ್ರಹಿಸಿದ ಜೇನು ತುಪ್ಪವನ್ನು ಪ್ಯಾಕಿಂಗ್, ಬ್ರಾಂಡಿಂಗ್ ಮಾಡಿ ಎಫ್.ಎಸ್.ಎಸ್.ಎ.ಐ ನೋಂದಣಿ ಮಾಡಿಸಿಕೊಂಡು ದಕ್ಷ ಉದ್ಯಮಶೀಲತೆಯಿಂ ಮುನ್ನಡೆಯಿರಿ. ಪರಿಶ್ರಮದಿಂದ ಮಾತ್ರ ಪ್ರತಿಫಲ ಸಿಗಲು ಸಾಧ್ಯ ಎಂದರು.

ಶಿಬಿರಾರ್ಥಿಗಳ ಅನಿಸಿಕೆಯಲ್ಲಿ ವಿಶೇಷ ಚೇತನ ಶಿಬಿರಾರ್ಥಿ ಸ್ವಾವಲಂಬನೆಯ ದಾರಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವುದು ಇತರರಿಗೆ ಪ್ರೇರಣೆಯಾಗಿತ್ತು.

ಕಾರ್ಯಕ್ರಮದಲ್ಲಿ ಹೆಬ್ರಿ ತಾಲೂಕು ಯೋಜನಾಧಿಕಾರಿ ಮಹೇಶ್, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್, ಜಿಲ್ಲಾ ವ್ಯವಸ್ಥಾಪಕರಾದ ನವ್ಯಾ, ರುಡ್ಸೆಟ್ ಸಂಸ್ಥೆಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಗಣೇಶ್ ಕಾರ್ಯಕ್ರಮ ನಿರೂಪಿಸಿದರು, ಸುಜಾತ ಸ್ವಾಗತಿಸಿ, ಶ್ರೀಲತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...
error: Content is protected !!