Saturday, January 17, 2026
Saturday, January 17, 2026

ಮಿರ್ಜಾ ಇಸ್ಮಾಯಿಲ್ ಹುಟ್ಟುಹಬ್ಬ ಆಚರಣೆ

ಮಿರ್ಜಾ ಇಸ್ಮಾಯಿಲ್ ಹುಟ್ಟುಹಬ್ಬ ಆಚರಣೆ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಮಿರ್ಜಾ ಇಸ್ಮಾಯಿಲ್ ಇವರ ಹುಟ್ಟು ಹಬ್ಬವನ್ನು ಮಂಗಳವಾರ ಉಡುಪಿಯ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಆಚರಿಸಲಾಯಿತು.

ಮಿರ್ಜಾ ಇಸ್ಮಾಯಿಲ್ ಅವರ ಮಾನವೀಯ ಗುಣಗಳನ್ನು ಗೌರವ ಕಾರ್ಯದರ್ಶಿಯಾದ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಯದರ್ಶಿ ಆನಂದ್ ಪಿ., ಹಾಗೂ ನರಸಿಂಹಮೂರ್ತಿ ಕೊಂಡಾಡಿದರು.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.
ಆನಂದ್ ಪಿ. ಸ್ವಾಗತಿಸಿ, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ. ಪಿ ವಂದಿಸಿದರು.

ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ದರ್ಸೆ, ಕಸಾಪ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಭಂಡಾರಿ, ತಾಲೂಕು ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಸುಭೋದ್ ಕುಮಾರ್, ಶಶಿಕಾಂತ್ ಶೆಟ್ಟಿ, ಈರಣ್ಣ ಕುರುವತ್ತಿ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!