Sunday, February 8, 2026
Sunday, February 8, 2026

ಗೋಸಂರಕ್ಷಣಾ ಜಾಗೃತಿ ವೇದಿಕೆ ಬಾರ್ಕೂರು- 11ನೇ ವರ್ಷದ ಗೋಪೂಜೆ

ಗೋಸಂರಕ್ಷಣಾ ಜಾಗೃತಿ ವೇದಿಕೆ ಬಾರ್ಕೂರು- 11ನೇ ವರ್ಷದ ಗೋಪೂಜೆ

Date:

ಬ್ರಹ್ಮಾವರ: ಗೋಸಂರಕ್ಷಣಾ ಜಾಗೃತಿ ವೇದಿಕೆ ಬಾರ್ಕೂರು ಇವರ ವತಿಯಿಂದ 11ನೇ ವರ್ಷದ ಗೋಪೂಜಾ ಕಾರ್ಯಕ್ರಮ ಇಂದು ಬಾರ್ಕೂರು ಕೋಟೆಕೇರಿ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ಅರ್ಚಕರಾದ ವೆಂಕಟರಮಣ ಭಟ್ ಅವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಶಾಂತರಾಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗಂಡು ಕರುವನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿದೆ. ಗಂಡು ಕರುವನ್ನು ನಿರ್ಲಕ್ಷ ಮಾಡದೇ ಎಲ್ಲರೂ ಪೋಷಿಸುವಂತೆ ಆಗಬೇಕು. ಸಾಧ್ಯವಾಗದಿದ್ದಲ್ಲಿ ಸಮೀಪದ ಗೋಶಾಲೆಗೆ ನೀಡಬೇಕು ಎಂದರು. ಆಡಳಿತ ಮೊಕ್ತೇಸರರಾದ ಮಂಜುನಾಥ ರಾವ್, ಗೋ ಸಂರಕ್ಷಣಾ ಜಾಗೃತಿ ವೇದಿಕೆಯ ಮುಖ್ಯಸ್ಥರಾದ ಶ್ರೀಧರ ಆಚಾರ್ಯ ಸಂತೆಗುಡ್ಡೆ ಬಾರ್ಕೂರು, ಬಿ ಸುಧಾಕರ ಬಾರ್ಕೂರು, ಶ್ರೀಕಾಂತ್ ಆಚಾರ್ ಬಾರ್ಕೂರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಬಿ.ಸುಧಾಕರ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಧರ ಆಚಾರ್ಯ ವಂದಿಸಿದರು. ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಕಾಶಿಯ ಪವಿತ್ರ ಗಂಗಾ ತೀರ್ಥವನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!