Sunday, February 23, 2025
Sunday, February 23, 2025

ಸಹನೆಯ ಪ್ರತಿಬಿಂಬ ಎನ್.ಎಸ್.ಎಸ್: ಅನಿಲ್ ಕುಮಾರ್ ಜೈನ್

ಸಹನೆಯ ಪ್ರತಿಬಿಂಬ ಎನ್.ಎಸ್.ಎಸ್: ಅನಿಲ್ ಕುಮಾರ್ ಜೈನ್

Date:

ಗಣಿತನಗರ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು, ನಾಯಕತ್ವವನ್ನು ಬೆಳೆಸುವುದರ ಜೊತೆಗೆ ಸಹನೆಯ ಪ್ರತಿಬಿಂಬವಾಗಿದೆ ಎಂದು ಅನಿಲ್ ಕುಮಾರ್
ಜೈನ್ ಹೇಳಿದರು.

ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ -2022ರ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಎನ್ನೆಸ್ಸಸ್‌ನಲ್ಲಿನ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿಂದಿನ ಶಕ್ತಿಯಾಗಿ ಎನ್ನೆಸ್ಸಸ್ ಪಾತ್ರವಹಿಸುತ್ತದೆ ಎಂದರು. ಶಿಬಿರವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ ಉದ್ಘಾಟಿಸಿ ಶುಭ ಹಾರೈಸಿದರು.

ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ.ಶಾಲೆಯ ಶಾಲಾ ಸಂಚಾಲಕ ರಾಜೇಂದ್ರ ಬಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಸುಜಾತ ಎನ್ ರಾಜ್, ಎಸ್,ಡಿ.ಎಂ.ಸಿ ಅಧ್ಯಕ್ಷ ಕಮಲಾಕ್ಷ ನಾಯಕ್, ಕುಕ್ಕುಂದೂರಿನ ಉದ್ಯಮಿ ತ್ರಿವಿಕ್ರಮ ಕಿಣಿ, ಕಾರ್ಕಳ ಜ್ಞಾನಸುಧಾ ಪಿಯು ಪ್ರಾಂಶುಪಾಲ ದಿನೇಶ್ ಎಂ ಕೊಡವೂರು, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು ಭಾಗವಹಿಸಿದ್ದರು.

ವಿದ್ಯಾರ್ಥಿ ನಾಯಕರಾದ ಪ್ರಸನ್ನ ಹಾಗೂ ಸ್ವಾತಿ ವೇದಿಕೆಯಲ್ಲಿದ್ದರು. ಕುಕ್ಕುಂದೂರು ಫ್ರೆಂಡ್ಸ್ ಮುಂಬೈ ಇದರ ಪ್ರಸನ್ನ ಕುಮಾರ್, ಜ್ಞಾನಸುಧಾ ಅಕಾಡೆಮಿಕ್ ಡೀನ್ ಡಾ. ಮಿಥುನ್ ಯು., ಶಾಲಾ ಹಿತೈಷಿ ವಿಠಲ ಶೆಟ್ಟಿ ಉಪಸ್ಥಿತರಿದ್ದರು. ಎನ್ನೆಸ್ಸಸ್ ಕಾರ್ಯಕ್ರಮಾಧಿಕಾರಿ ರವಿ ಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ವಂದಿಸಿದರು. ಜ್ಞಾನಸುಧಾ ಪಿಯು ಕಾಲೇಜಿನ ಸಂಸ್ಥೆಯ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!