Monday, September 23, 2024
Monday, September 23, 2024

ಸಮೃದ್ಧಿ ಯುವಕ ಮಂಡಲ- ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರ

ಸಮೃದ್ಧಿ ಯುವಕ ಮಂಡಲ- ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಾಗಾರ

Date:

ಸಿದ್ಧಾಪುರ: ಸಮೃದ್ಧಿ ಯುವಕ ಮಂಡಲ(ರಿ) ಕುಳ್ಳಂಜೆ ಶಂಕರನಾರಾಯಣ ಇದರ ವತಿಯಿಂದ ಪರಿಸರ ಸಂವರಕ್ಷಣೆ ಕಾರ್ಯಾಗಾರ ನಡೆಯಿತು. ಶಂಕರನಾರಾಯಣ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಾಜೀವ ಶೆಟ್ಟಿ ಶಾಡಿಗುಂಡಿ ಕಾರ್ಯಾಗಾರ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ, ಎಂ ಸಿ.ಎಲ್ ಸಂಸ್ಥೆಯ ಬಿಡಿಎ ಅಧಿಕಾರಿ ರಾಮಚಂದ್ರ ಕೆಂಬಾರೆ, ಇತ್ತೀಚಿನ ದಿನಗಳಲ್ಲಿ ಜಾಗತಿಕ ತಾಪಮಾನ ವಿಪರೀತವಾಗಿ ಏರುತ್ತಿದ್ದು, ಇನ್ನೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ದೊಡ್ಡ ನಷ್ಟ ಉಂಟಾಗಬಹುದು ಎಂದರು. ಎಂ.ಸಿ.ಎಲ್.ನ ಇನ್ನೋರ್ವ ಬಿ.ಡಿ.ಎ ರಾಮಮೋಹನ್ ಶೆಟ್ಟಿಗಾರ್ ಶುಭ ಹಾರೈಸಿದರು.

ಸಮೃದ್ಧಿ ಯುವಕ ಮಂಡಲ ಸ್ಥಾಪಕಾಧ್ಯಕ್ಷರಾದ ನಾಗರಾಜ ತಲ್ಲಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ರಘುರಾಮ ತಲ್ಲಂಜೆ, ಪ್ರದೀಪ ನಾಯ್ಕ ಬಾಳೆಕೊಡ್ಲು, ನ್ಯಾಷನಲ್ ಐಟಿಐ ಬಾರ್ಕೂರು ಇದರ ನಿವೃತ್ತ ಪ್ರಾಂಶುಪಾಲರಾದ ದಿನಕರ ತೊಳಾರ್, ಜೇಸಿಐನ ಪೂರ್ವಾಧ್ಯಕ್ಷರಾದ ರಾಘವೇಂದ್ರ ಕುಪ್ಪಾರು, ರತೀಶ ಕನ್ನಂತ, ಉದಯ ರಾವ್ ಕೆ ಉಪಸ್ಥಿತರಿದ್ದರು.

ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಪ್ರವೀಣ ಬಾಳೆಕೊಡ್ಲು ಸ್ವಾಗತಿಸಿ, ಉಪನ್ಯಾಸಕ ಹಾಗೂ ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರಕಾಶ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!