Wednesday, February 26, 2025
Wednesday, February 26, 2025

ಆರೂರು- ವಿಮಾ ಕಾರ್ಡ್, ಸಮವಸ್ತ್ರ ವಿತರಣೆ

ಆರೂರು- ವಿಮಾ ಕಾರ್ಡ್, ಸಮವಸ್ತ್ರ ವಿತರಣೆ

Date:

ಬ್ರಹ್ಮಾವರ: ಸ್ವಾವಲಂಬಿ ಭಾರತ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ವಿಷ್ಣುಮೂರ್ತಿ ಯುವಕ ಮಂಡಲ ಸಹಕಾರದಿಂದ 18 ನೇ ಶಾಲೆ ಆರೂರು ಮಹತೋಭಾರ ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 41 ಲಕ್ಷದ 4 ಸಾವಿರದ ವಿಮಾಮೊತ್ತದ ಉಚಿತ ಅಪಘಾತ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ವಿಮಾ ಕಾರ್ಡ್ ವಿತರಣೆ ಕಾರ್ಯಕ್ರಮ ಆರೂರು ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಎ. ರತ್ನಾಕರ ಭಟ್ ಉದ್ಘಾಟನೆ ನೆರವೇರಿಸಿದರು. ಸ್ವಾವಲಂಬಿ ಭಾರತ ಜಿಲ್ಲಾ ಪ್ರಮುಖ್ ಹಾಗೂ ಕೊಡವೂರು ನಗರಸಭಾ ಸದಸ್ಯರಾದ ಕೆ ವಿಜಯ ಕೊಡವೂರು ಮಾತನಾಡಿ, ಉಡುಪಿ ಜಿಲ್ಲೆಯ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ ಮಕ್ಕಳಿಗೆ ಕೆಲವು ಕಡೆ ಅವಘಡ ಆಗಿದ್ದನ್ನು ರಕ್ಷಣೆಯಾಗಿರುವುದಕ್ಕೆ ಮನಗಂಡು ಹಲವಾರು ದಾನಿಗಳ ಮುಖಾಂತರ ಮಕ್ಕಳಿಗೆ ಉತ್ತಮ ಸೌಲಭ್ಯ ನೀಡುವುದರಲ್ಲಿ ಇದೊಂದು ದಿಟ್ಟ ಹೆಜ್ಜೆ ಎಂದು ಹೇಳಿದರು. ಶ್ರೀ ರಾಮಚಂದ್ರನ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು ಎಂದರು.

ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ನ ಮಾರಾಟ ವಿಭಾಗದ ಸೀನಿಯರ್ ಮ್ಯಾನೇಜರ್ ಉದಯ ನಾಯ್ಕ್ ಮಾತನಾಡಿ, ಸಂಪೂರ್ಣ ವಿಮಾ ಸೌಲಭ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಿ, ನಗರಸಭಾ ಸದಸ್ಯ ವಿಜಯ ಕೊಡವೂರವರ ಆದರ್ಶ ಮಹಾನಾಯಕರ ಹಾದಿ, ಅಭಿವೃದ್ಧಿ ಕನಸು ನನಸಾಗಲಿ, ದೇಶದಲ್ಲಿ ಮಾದರಿಯಾಗಲಿ ಎಂದರು.

ಉಡುಪಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ ರಾವ್ ಶುಭ ಹಾರೈಸಿದರು. ವಿಮಾ ದಾನಿಗಳಾಗಿರುವ ಶ್ರೀ ಮಹಾಗಣಪತಿ ಪೈಂಟಿಂಗ್ ಕಾಂಟ್ರಾಕ್ಟರ್ ಸುರೇಶ್ ಶೇರಿಗಾರ್ ಇವರನ್ನು ಸನ್ಮಾನಿಸಲಾಯಿತು.

ಆರೂರು ಗ್ರಾಮ ಪಂಚಾಯತ್ ಸದಸ್ಯ ಉದಯ ನಾಯ್ಕ್, ಚಂದ್ರಾವತಿ ಹೆಬ್ಬಾರ್, ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷರಾಗಿರುವ ಗಣಪತಿ ನಾಯ್ಕ್, ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್ ನಾಯ್ಕ್, ಕೊಡವೂರ್ ಅಭಿವೃದ್ಧಿ ಸಮಿತಿಯ ವಿನಯ ನಾಯ್ಕ್, ಸಂತೋಷ್, ಯುವಕ ಮಂಡಲದ ಸರ್ವ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರ ಸಂದೀಪ್ ಹೆಗ್ಡೆ ಸ್ವಾಗತಿಸಿ, ಮಹೇಶ್ ಶೇರಿಗಾರ್ ವ೦ದಿಸಿದರು. ಯಾದವ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!