Tuesday, February 25, 2025
Tuesday, February 25, 2025

ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ- ಯಶ್ಪಾಲ್ ಸುವರ್ಣ ಅಭಿನಂದನೆ

ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ- ಯಶ್ಪಾಲ್ ಸುವರ್ಣ ಅಭಿನಂದನೆ

Date:

ಉಡುಪಿ: ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ವತಿಯಿಂದ ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆ ರಾಜ್ಯ ಸಚಿವರಾದ ಎಲ್ ಮುರುಗನ್ ರವರನ್ನು ಭೇಟಿಯಾಗಿ ನಾಡದೋಣಿ ಮೀನುಗಾರಿಕೆಗೆ ಸಮರ್ಪಕ ಸೀಮೆ ಎಣ್ಣೆ ಪೂರೈಕೆಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಮಾಡುವ ಮೂಲಕ ಬಡ ಮೀನುಗಾರರ ಬಗ್ಗೆ ತಮ್ಮ ಕಾಳಜಿ ಮೆರೆದಿದೆ.

ನಾಡದೋಣಿ ಮೀನುಗಾರರ ಬಹುದಿನದ ಬೇಡಿಕೆಯಾದ ಸೀಮೆ ಎಣ್ಣೆ ಪೂರೈಕೆ ಸಮಸ್ಯೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಗೊಳಿಸುವಲ್ಲಿ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಮೀನುಗಾರಿಕೆ ಸಚಿವರಾದ ಪರ್ಶೋತ್ತಮ್ ರೂಪಾಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ, ಮೀನುಗಾರಿಕೆ ಸಚಿವರಾದ ಅಂಗಾರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!