Tuesday, February 25, 2025
Tuesday, February 25, 2025

ಗಮನ ಸೆಳೆದ ಸಸ್ಯ ಸಂತೆ

ಗಮನ ಸೆಳೆದ ಸಸ್ಯ ಸಂತೆ

Date:

ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ಇಂದಿನಿಂದ ನವೆಂಬರ್ 7 ರ ವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮದಲ್ಲಿ 40 ಕ್ಕೂ ಅಧಿಕ ಜಾತಿಯ ಅಲಂಕಾರಿಕಾ ಸಸ್ಯಗಳು, 15 ಕ್ಕೂ ಅಧಿಕ ಜಾತಿಯ ಹಣ್ಣಿನ ಸಸ್ಯಗಳು, ತೆಂಗು, ಕಾಳು ಮೆಣಸಿನ ಸಸಿಗಳು, 50 ಕ್ಕೂ ಹೆಚ್ಚು ತರಕಾರಿ ಮತ್ತು ಹಣ್ಣಿನ ಬೀಜಗಳ ಮಾರಾಟ ಕೃಷಿ ಮತ್ತು ತೋಟಗಾರಿಕಾ ಆಸಕ್ತರನ್ನು ಗಮನ ಸೆಳೆಯುತ್ತಿದೆ.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಖಾಸಗಿ ನರ್ಸರಿ ಮತ್ತು ಸರ್ಕಾರಿ ನರ್ಸರಿಯಲ್ಲಿ ಬೆಳೆಸಿದ ಸಸ್ಯಗಳು, ಕಸಿ ಗಿಡಗಳು, ನರ್ಸರಿ ಉಪಕರಣಗಳ ಮಾರಾಟ ನಡೆಯುತ್ತಿದೆ.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಉದ್ಘಾಟನೆ ನೆರವೇರಿಸಿದರು

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ನಗರ ಪ್ರದೇಶದಲ್ಲಿ ಮನೆಯ ಆವರಣದಲ್ಲಿ ಜಾಗದ ಕೊರತೆ ಇದ್ದರೂ ಸಹ ಮನೆಗಳ ಮೇಲ್ಛಾವಣಿಯಲ್ಲಿ ಹೂ ಮತ್ತು ಹಣ್ಣಿನ ಸಸ್ಯಗಳನ್ನು ಬೆಳೆಸಲು ಸಾಧ್ಯವಿದ್ದು, ಈ ಸಸ್ಯಸಂತೆಯ ಮೂಲಕ ಉತ್ತಮ ಸಸಿಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು.

ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಗಿರೀಶ್ ಅಂಚನ್, ಪ್ರಭಾಕರ ಪೂಜಾರಿ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕಿ ಭುವನೇಶ್ವರಿ, ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶ್ರೀನಿವಾಸ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!