Wednesday, February 26, 2025
Wednesday, February 26, 2025

ಭೂ ಪರಿವರ್ತನೆಗೆ ಅವಕಾಶ- ಪ.ಜಾತಿ ಮುಖಂಡರಿಂದ ಶಾಸಕರಿಗೆ ಅಭಿನಂದನೆ

ಭೂ ಪರಿವರ್ತನೆಗೆ ಅವಕಾಶ- ಪ.ಜಾತಿ ಮುಖಂಡರಿಂದ ಶಾಸಕರಿಗೆ ಅಭಿನಂದನೆ

Date:

ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನವೆಂಬರ್ 5 ರಂದು ಸರ್ಕಾರ ಆದೇಶ ಹೊರಡಿಸಿದೆ.

ಈ ವಿಚಾರದ ಕುರಿತು ಶಾಸಕ ಕೆ ರಘುಪತಿ ಭಟ್ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಇಟ್ಟು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ್ದರು.

ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಭಾನುವಾರ ಶಾಸಕರ ಮನೆಗೆ ಆಗಮಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದಕ್ಕಾಗಿ ಅಭಿನಂದಿಸಿದರು.

ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಬಾಬು, ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಗೋಪಾಲ ಕಳಂಜೆ, ಉಪಾಧ್ಯಕ್ಷರಾದ ಸುಂದರ್ ಕೆ., ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಕಾರ್ಯದರ್ಶಿಗಳಾದ ಸುಜಿತ್ ಕಪ್ಪೆಟ್ಟು, ನಗರಸಭಾ ಸದಸ್ಯರಾದ ರಾಜು ಕೆ., ಸಂಪಾವತಿ, ನಗರ ಬಿಜೆಪಿ ಎಸ್. ಸಿ ಮೋರ್ಚಾದ ಅಧ್ಯಕ್ಷರಾದ ಕಿರಣ್ ಕಟ್ಟೆಗುಡ್ಡೆ, ದಲಿತ ಮುಖಂಡರಾದ ಎಸ್. ನಾರಾಯಣ್, ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷರಾದ ಹರೀಶ್ ಮಲ್ಪೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!