Monday, February 24, 2025
Monday, February 24, 2025

ಶ್ರೀ ಕೃಷ್ಣಮಠ: ಶ್ರೀನಿವಾಸ ಕಲ್ಯಾಣ ಹರಿಕಥಾ ಸಮಾರೋಪ

ಶ್ರೀ ಕೃಷ್ಣಮಠ: ಶ್ರೀನಿವಾಸ ಕಲ್ಯಾಣ ಹರಿಕಥಾ ಸಮಾರೋಪ

Date:

ಉಡುಪಿ: ಶ್ರೀ ಕೃಷ್ಣಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಶ್ರೀ ಹಂಡೆದಾಸ ಪ್ರತಿಷ್ಠಾನ (ರಿ.) ಕಾರ್ಕಳ ಇದರ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 20.09.2021 ಸೋಮವಾರದಿಂದ 07.10.2021 ಗುರುವಾರದವರೆಗೆ 18 ದಿನಗಳ ಪರ್ಯಂತ ನಡೆಯುತ್ತಿರುವ ‘ಶ್ರೀನಿವಾಸ ಕಲ್ಯಾಣ’ದ ಹರಿಕಥಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅಧ್ಯಕ್ಷತೆಯನ್ನು ವಹಿಸಿ, ಭಾಗವತದ ಕಥೆಗಳನ್ನು ಅಧ್ಯಯನ ಮಾಡಿ ಇತರರೊಂದಿಗೆ ಹರಿಕಥೆಯ ಮೂಲಕ ಮಾಡಿಸಿ ಸಾಮಾನ್ಯ ಜನರಿಗೆ ಭಗವಂತನ ಮಹಿಮೆಗಳನ್ನು ಪ್ರಸಾರ ಮಾಡಿ ಅದರ ಮೂಲಕ ತಮ್ಮ ತಂದೆ, ಅಜ್ಜ ಮುಂತಾದ ಹರಿದಾಸರ ಪರಂಪರೆಯನ್ನು ಮುಂದುವರಿಸುವಲ್ಲಿ ರುಕ್ಮಿಣಿ ಹಂಡೆಯವರು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಅವರನ್ನು ಮತ್ತು ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದು ಹಾರೈಸಿದರು.

ಅತಿಥಿಗಳಾದ ವಿದ್ವಾಂಸರಾದ ಎಂ.ಎಲ್.ಸಾಮಗ ಮಾತನಾಡಿ, ಇಂದಿನ ದಿನಗಳಲ್ಲಿ ಹರಿಕಥೆಯಂತಹ ಉತ್ತಮ ಕಲೆಯನ್ನು ಇಷ್ಟು ಮಂದಿಗೆ ಹೇಳಿ ಅವರಿಂದ ಕಥೆ ಹೇಳಿಸಿ ಇತರರನ್ನು ಬೆಳೆಸುವಂತಹ ರುಕ್ಮಿಣಿ ಹಂಡೆಯವರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ, ನಮ್ಮ ಜವಾಬ್ದಾರಿ ಎಂದರು. ಪ್ರತಿಷ್ಠಾನದ ಉಪಾಧ್ಯಕ್ಷರಾದ ವೇದವ್ಯಾಸ ಐತಾಳ ಸ್ವಾಗತಿಸಿ, ಪ್ರತಿಷ್ಠಾನದ ಸದಸ್ಯರಾದ ರಾಮಚಂದ್ರ ಉಪಾಧ್ಯಾಯ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!