Monday, February 24, 2025
Monday, February 24, 2025

ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ

ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದರು.

ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್ಸರ್‌ವರ್‌ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!