ಉಡುಪಿ: ಇದೇ ತಿಂಗಳ 25, 26ರಂದು ಅಂಬಲಪಾಡಿಯ ಭವಾನಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 26ರ ಶನಿವಾರ ಬೆಳಗ್ಗೆ 10 ಗಂಟೆಗೆ ನಾಡಿನ ಪ್ರಸಿದ್ಧ ಚಿಂತಕಿ ವೀಣಾ ಬನ್ನಂಜೆ ಅವರು ಉದ್ಘಾಟಿಸಲಿದ್ದಾರೆ ಎಂದು ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.