Sunday, September 22, 2024
Sunday, September 22, 2024

ಗ್ರಂಥಾಲಯದಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಆಯೋಜಿಸಿ: ರಘುಪತಿ ಭಟ್

ಗ್ರಂಥಾಲಯದಲ್ಲಿ ಐಎಎಸ್, ಕೆಎಎಸ್ ಕೋಚಿಂಗ್ ಆಯೋಜಿಸಿ: ರಘುಪತಿ ಭಟ್

Date:

ಉಡುಪಿ: ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು.

ಬುಧವಾರ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಹೆಚ್ಚು ಓದುವ ಹವ್ಯಾಸ ಮನುಷ್ಯನ ವ್ಯಕ್ತಿತ್ವವನ್ನು ಪ್ರಬುದ್ಧವಾಗಿಸುತ್ತದೆ. ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.

ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಉಪಾಧ್ಯಕ್ಷೆ ವಸಂತಿ ಶೆಟ್ಟಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ, ಪ್ರಾಧ್ಯಾಪಕಿ ಡಾ. ನಿಕೇತನ, ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.

ಎಂಐಟಿ ಸೆಂಟ್ರಲ್ ಲೈಬ್ರರಿ ಚೀಫ್ ಲೈಬ್ರೇರಿಯನ್ ಡಾ. ರೇಖಾ ಡಿ. ಪೈ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುವಲ್ಲಿ ಗ್ರಂಥಾಲಯಗಳ ಪಾತ್ರ ವಿಷಯದಲ್ಲಿ ಮನೋರೋಗ ತಜ್ಞ ಡಾ. ಪಿ. ವಿ. ಭಂಡಾರಿ ಉಪನ್ಯಾಸ ನೀಡಿದರು. ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ. ಐ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ದರ್ಜೆ ಸಹಾಯಕಿ ಪ್ರೇಮ ನಿರೂಪಿಸಿ, ಗ್ರಂಥಪಾಲಕಿ ರಂಜಿತಾ ಸಿ. ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!