Saturday, September 28, 2024
Saturday, September 28, 2024

ಉಡುಪಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ

Date:

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 13ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 25 ಶುಕ್ರವಾರ ಹಾಗೂ 26 ಶನಿವಾರದಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ.

ನ. 25 ಶುಕ್ರವಾರ ಮಧ್ಯಾಹ್ನ ಗಂಟೆ 2:30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಚಿಗುರು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಡಾ. ನಿ. ಬಿ ವಿಜಯ ಬಲ್ಲಾಳ್ ಉದ್ಘಾಟಿಸಲಿರುವರು. ಗಂಟೆ 2.45ಕ್ಕೆ ಮಕ್ಕಳ ಕವಿಗೋಷ್ಠಿ, ನೃತ್ಯ, ಜನಪದ ಹಾಗೂ ಶಾಸ್ತ್ರೀಯ ಸಂಗೀತ, ಏಕಪಾತ್ರ ಅಭಿನಯ, ನಾಟಕ ನಡೆಯಲಿದೆ.

ನವಂಬರ್ 26 ಶನಿವಾರದಂದು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ನೇತೃತ್ವದಲ್ಲಿ ಬೆಳಗ್ಗೆ 8:30 ರಿಂದ ಧ್ವಜಾರೋಹಣ, ಅಂಬಲಪಾಡಿ ರಾ.ಹೆ.೬೬ ಬಳಿಯಿಂದ ಸಮ್ಮೇಳನ ಅಧ್ಯಕ್ಷರಾದ ಡಾ. ಎನ್.ಟಿ. ಭಟ್ ಅವರನ್ನು ಮೆರವಣಿಗೆ ಮೂಲಕ ಭವಾನಿ ಮಂಟಪಕ್ಕೆ ಕರೆತರುವುದು, ವಸ್ತು ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಪುಸ್ತಕ ಮಳಿಗೆಗಳ ಉದ್ಘಾಟನೆ, ನಂತರ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಪ್ರಸಿದ್ಧ ಚಿಂತಕಿ ವೀಣಾ ಬನ್ನಂಜೆ ಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾರೆ.

ಕವಿ ಗೋಷ್ಠಿ, ಕಥಾ ಗೋಷ್ಠಿ, ವಿಚಾರ ಗೋಷ್ಠಿಗಳು, ಸಾಂಸ್ಕೃತಿಕ ವೈವಿಧ್ಯ, ಸಮ್ಮೇಳನ ಅಧ್ಯಕ್ಷರೊಂದಿಗೆ ಸಂವಾದ, ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಗೌರವ ಅಭಿನಂದನೆ ನಡೆಯಲಿದ್ದು ಸಂಜೆ 4:00 ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

ನಾನೇ ಅಡ್ಜಸ್ಟ್ ಮಾಡಿಕೊಳ್ಳುವುದು

ಸಂಜೆ ಡ್ಯೂಟಿ ಮುಗಿಸಿ ಮನೆಗೆ ಬಂದ ಹೆಂಡತಿ "ನಾನೇ ಎಲ್ಲ ಕೆಲಸ...
error: Content is protected !!