Tuesday, October 15, 2024
Tuesday, October 15, 2024

ಉಡುಪಿ ಕೇದಾರ ಕಜೆ ಅಕ್ಕಿ ಬಿಡುಗಡೆ

ಉಡುಪಿ ಕೇದಾರ ಕಜೆ ಅಕ್ಕಿ ಬಿಡುಗಡೆ

Date:

ಉಡುಪಿ: ಉಡುಪಿಯಲ್ಲಿ ಆರಂಭಿಸಿದ “ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ” ಇದರ ನೂತನ ಕಚೇರಿ ಹಾಗೂ ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಬೆಳೆದ ಭತ್ತದಿಂದ ಉತ್ಪಾದಿಸಿದ ಅಕ್ಕಿ “ಉಡುಪಿ ಕೇದಾರ ಕಜೆ” ಮಾರಾಟ ಕೇಂದ್ರದ ಉದ್ಘಾಟನೆ ಇಂದು ಹಿರಣ್ಯ ಫೈನಾನ್ಸ್ ಕಟ್ಟಡದಲ್ಲಿ ನಡೆಯಿತು.

ಪಶುಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ಉದ್ಘಾಟನೆ ನೆರವೇರಿಸಿ ಗ್ರಾಹಕರಾದ ಸಿ. ಎ. ನಾರಾಯಣ ಅವರಿಗೆ “ಉಡುಪಿ ಕೇದಾರ ಕಜೆ” ಅಕ್ಕಿ ವಿತರಿಸಿದರು.

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ ಉಡುಪಿಯಲ್ಲಿ ಕೈಗೊಂಡ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಬೆಳೆದ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿಯನ್ನು “ಉಡುಪಿ ಕೇದಾರ ಕಜೆ” ಹೆಸರಿನಲ್ಲಿ ಮಾರುಕಟ್ಟೆಗೆ ತರಲಾಗಿದೆ.

ಈ ಅಕ್ಕಿಯನ್ನು “ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ” ಮೂಲಕ ಮಾರಾಟ ಮಾಡಲಾಗುತ್ತಿದ್ದು, ಅದರ ನೂತನ ಕಚೇರಿಯನ್ನು ಉಡುಪಿಯ ಹಿರಣ್ಯ ಫೈನಾನ್ಸ್ ಕಟ್ಟಡದಲ್ಲಿ ಆರಂಭಿಸಲಾಗಿದೆ. ಗ್ರಾಹಕರು ಅಲ್ಲಿ ಅಕ್ಕಿಯನ್ನು ಖರೀದಿಸುವ ಮೂಲಕ ರೈತರನ್ನು ಪ್ರೋತ್ಸಾಹಿಸಬೇಕು.

ಮುಂದಿನ ಬಾರಿ ರೈತರೇ ತಮ್ಮ ಭೂಮಿಯಲ್ಲಿ ಕೃಷಿ ಮಾಡುವಂತೆ ಪ್ರೇರೇಪಿಸಿ ಅವರು ಬೆಳೆದ ಭತ್ತವನ್ನು “ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ” ಮೂಲಕ ರೈತರಿಗೆ ಉತ್ತಮ ಬೆಲೆಯನ್ನು ನೀಡಿ ಖರೀದಿಸಿ ರೈತರಿಗೆ ಸಹಕಾರವನ್ನು ನೀಡಲಾಗುವುದು ಎಂದು ಶಾಸಕ ಕೆ ರಘುಪತಿ ಭಟ್ ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!