Friday, September 20, 2024
Friday, September 20, 2024

ಎಂ.ಜಿ.ಎಂ ಕಾಲೇಜು- ಮಾನವ ಹಕ್ಕು ದಿನಾಚರಣೆ

ಎಂ.ಜಿ.ಎಂ ಕಾಲೇಜು- ಮಾನವ ಹಕ್ಕು ದಿನಾಚರಣೆ

Date:

ಉಡುಪಿ: ಮಾನವ ಹಕ್ಕು ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕು. ಇದನ್ನು ಯಾರು ಯಾವ ಸಂದರ್ಭದಲ್ಲಿಯೂ ಉಲ್ಲಂಘಿಸಲು ಸಾಧ್ಯವಿಲ್ಲ. ಇದು ಯಾವುದೇ ಸರ್ಕಾರ, ವ್ಯಕ್ತಿ ನೀಡಿದ ಹಕ್ಕಾಗಿರದೇ ಪ್ರಕೃತಿದತ್ತವಾಗಿ ಪಡೆದ ಹಕ್ಕು.

ಮಾನವ ಹಕ್ಕುಗಳನ್ನು ಗುರುತಿಸುವಲ್ಲಿ ಭಾರತ ಉತ್ಕೃಷ್ಟ ಸ್ಥಾನದಲ್ಲಿ ನಿಲ್ಲುತ್ತದೆ. ಭಾರತೀಯ ಸನಾತನ ಪರಂಪರೆಯಲ್ಲಿ ಮಾನವ ಹಕ್ಕುಗಳನ್ನು ಗುರುತಿಸಿ ಗೌರವಿಸಬೇಕು ಅನ್ನುವ ದಾಖಲೆಗಳು ನಮ್ಮ ವೇದ ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.

ಆದರೆ ಈ ಜ್ಞಾನವನ್ನು ಜಗತ್ತಿಗೆ ತಿಳಿಸುವಲ್ಲಿ ನಾವು ಹಿಂದಿರುವ ಕಾರಣ ನಮ್ಮ ಪಠ್ಯ ಪುಸ್ತಕಗಳಲ್ಲಿ ಮಾನವ ಹಕ್ಕುಗಳ ಕೊಡುಗೆಗಳಲ್ಲಿ ಪಾಶ್ಚಾತ್ಯರ ಹೆಸರುಗಳು ರಾರಾಜಿಸುತ್ತಿರುವುದು ವಿಪರ್ಯಾಸವೇ ಸರಿ.

ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ವಿಶ್ವ ಸಂಸ್ಥೆಯೇ ಸೇೂತಿರುವುದು ಅದರಲ್ಲೂ ವಿಶ್ವ ಸಂಸ್ಥೆಯ ಖಾಯಂ ಸದಸ್ಯರುಗಳಾದ ಅಮೇರಿಕಾ, ರಷ್ಯಾ, ಚೀನಾದಂತಹ ರಾಷ್ಟ್ರಗಳೇ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತಿರುವುದು ನಿಜಕ್ಕೂ ಬೇಸರದ ಬೆಳವಣಿಗೆ.

ಭಾರತದಂತಹ ರಾಷ್ಟ್ರಗಳು ವಿಶ್ವಸಂಸ್ಥೆಯ ಮುಂದಾಳತ್ವ ವಹಿಸುವ ಕಾಲ ಕೂಡಿಬಂದಿದೆ ಎಂದು ಅಂಕಣಕಾರ ರಾಜಕೀಯ ವಿಶ್ಲೇಷಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಮಾನವ ಹಕ್ಕು ಘಟಕ, ಐ.ಕ್ಯೂ.ಎ.ಸಿ, ರೆಡ್ ಕ್ರಾಸ್‌ ಘಟಕ ಹಾಗೂ ರಾಜಕೀಯಶಾಸ್ತ್ರ, ಇತಿಹಾಸ ವಿಭಾಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಅವರು ವಿಶೇಷ ಉಪನ್ಯಾಸ‌ ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಚಿತ್ರಪಾಡಿ ಲಕ್ಷ್ಮೀನಾರಾಯಣ ಕಾರಂತ ವಹಿಸಿದ್ದರು.

ಮಾನವ ಹಕ್ಕು ಘಟಕದ ಸಂಚಾಲಕ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಸುಬೇೂಧ ಪೈ ಪ್ರಾಸ್ತಾವನೆಗೈದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರತಿನಿಧಿಗಳಾದ ವಿನ್ಯಾಸ್ ಪೈ ಸ್ವಾಗತಿಸಿ, ವಿಜೇತಾ ಹೆಗಡೆ ವಂದಿಸಿದರು. ಕೆ.ಎಂ. ಪವಿತ್ರಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!