Wednesday, September 25, 2024
Wednesday, September 25, 2024

ಎಚ್‍.ಎಂ.ಎಂ.ವಿ. ಕೆ. ಆರ್- ಮಹೋತ್ಸವ 2022

ಎಚ್‍.ಎಂ.ಎಂ.ವಿ. ಕೆ. ಆರ್- ಮಹೋತ್ಸವ 2022

Date:

ಉಡುಪಿ: ಕುಂದಾಪುರ ಎಜ್ಯುಕೇಶನ್‍ ಸೊಸೈಟಿ (ರಿ.) ಪ್ರವರ್ತಿತ ಎಚ್‍. ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ “ಮಹೋತ್ಸವ-2022” ಒಂದನೇ ದಿನದ ಶಾಲಾ
ವಾರ್ಷಿಕೋತ್ಸವ ಸಮಾರಂಭವು ಬೈಂದೂರು ಶಾಸಕರು ಹಾಗೂ ಶಾಲಾ ಸಂಚಾಲಕರಾದ ಬಿ. ಎಮ್‍. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಪನ್ನಗೊಂಡಿತು.

ಸಮಾರಂಭದಲ್ಲಿ ಎಸ್‍. ಎಸ್‍. ಎಲ್‍. ಸಿ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಸಕರು, ಸಾಧನೆಗೆ ಬಡತನ ಅಡ್ಡಿಯಲ್ಲ; ಸಾಧಿಸುವ
ಛಲವೊಂದಿದ್ದರೆ ಯಶಸ್ಸು ಶತಸಿದ್ಧ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‍ ಎಂ ಮಾತನಾಡಿ, ಗುರಿಯೆಡೆಗೆ ಸ್ಪಷ್ಟತೆ ಇರಬೇಕು. ಹಲವಾರು ಋಣಾತ್ಮಕ ಅಂಶಗಳು ನಮ್ಮನ್ನು ಬಾಧಿಸಬಹುದು, ಅವುಗಳನ್ನು ಮೆಟ್ಟಿನಿಂತು ಮುಂದುವರಿದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಬಹುದು. ಅಂತಹ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣ ಈ ಸಂಸ್ಥೆಯಲ್ಲಿ ಕಂಡುಬರುತ್ತಿದೆ ಎಂದರು.

ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್‍, ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್‍., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ‍ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್‍ ಆಚಾರ್‍, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್‍, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಜಿ. ಭಟ್‍ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ನೃತ್ಯ ಸಿಂಚನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!