Wednesday, September 25, 2024
Wednesday, September 25, 2024

ಚರ್ಮ ಗಂಟು ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮ

ಚರ್ಮ ಗಂಟು ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮ

Date:

ಕೋಟ: ಕೃಷಿ ಹಾಗೂ ಹೈನುಗಾರಿಕೆ ಬಗ್ಗೆ ನೈಜ ಮಾಹಿತಿ ಪಡೆದು ಉದ್ಯಮದಲ್ಲಿ ನಿರತರಾದರೆ ಯಾವುದೇ ರೀತಿಯ ನಷ್ಟವಿಲ್ಲ, ಅದೊಂದು ಲಾಭದಾಯಕ ಉದ್ಯಮವಾಗಿದೆ ಎಂದು ಉಡುಪಿ ಪಶುಪಾಲನ ಇಲಾಖೆ ಪಶುವೈದ್ಯಾಧಿಕಾರಿ ಮಂಜುನಾಥ್ ಅಡಿಗ ಹೇಳಿದರು.

ಹಂದಟ್ಟು ಹಾಲು ಉತ್ಪದಕಾರ ಮಹಿಳಾ ಸಂಘದ ಸಭಾಭವನದಲ್ಲಿ ಏರ್ಪಡಿಸಿದ ಚರ್ಮ ಗಂಟು ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತಿಚಿನ ದಿನಗಳಲ್ಲಿ ಹಸುಗಳಲ್ಲಿ ಕಂಡುಬರುವ ಚರ್ಮಗಂಟು ರೋಗದ ಬಗ್ಗೆ ಪಶು ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.

ಹಂದಟ್ಟು ಹಾಲು ಉತ್ಪದಕಾರ ಸಹಕಾರಿ ಸಂಘದ ಅಧ್ಯಕ್ಷರಾದ ಜಾನಕಿ ಹಂದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಹಸಿರು ಆತ್ಮಕೃಷಿ ಸಂಘದ ಅಧ್ಯಕ್ಷ ಸುಜಾತಾ ಭಂಡಾರಿ ವಹಿಸಿದ್ದರು.

ಉಡುಪಿ ಜಿಲ್ಲಾ ಸಹಾಯಕ ಕೃಷಿ ನಿರ್ದೇಶಕ ಮೋಹನರಾಜ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಡುಪಿ ಕೃಷಿ ಇಲಾಖೆ ತಾಂತ್ರಿಕ ಸಹಾಯಕ ನಿರ್ದೇಶಕಿ ಸಂಜನಾ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!