Wednesday, September 25, 2024
Wednesday, September 25, 2024

ಮಹಿಳಾ ಆಟೋ ರಿಕ್ಷಾ ಚಾಲಕರಿಗೆ ತರಬೇತಿ

ಮಹಿಳಾ ಆಟೋ ರಿಕ್ಷಾ ಚಾಲಕರಿಗೆ ತರಬೇತಿ

Date:

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೊಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಹಿಳಾ ಆಟೋರಿಕ್ಷಾ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು ಉದ್ಘಾಟಿಸಿ, ಜ್ಞಾನವಿಕಾಸದ ಮಹತ್ವದ ಬಗ್ಗೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿ, ಆಟೋ ರಿಕ್ಷಾ ತರಬೇತಿ ಪಡೆದು ಮಹಿಳೆ ಸ್ವಾವಲಂಬನೆ ಹೊಂದುವಂತೆ ಕರೆ ನೀಡಿದರು..

ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸುಲತಾ ಹೆಗ್ಡೆ ಮಾತನಾಡಿ, ಮಹಿಳೆ ಇಂದು ಸ್ವಾವಲಂಬಿ ಬದುಕಿನತ್ತ ಸಾಗುತ್ತಿರುವುದು ಪ್ರಶಂಸನೀಯ, ಮಹಿಳೆಯರು ಇಂದು ಎಲ್ಲಾ ರಂಗದಲ್ಲಿ ಮುಂಚೂಣಿಗೆ ನಿಲ್ಲುತ್ತಿದ್ದಾರೆ.

ಮಹಿಳೆ ಎನ್ನುವುದು ಒಂದು ಶಕ್ತಿಯಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ಮಹಿಳೆ ಆಟೋ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಪುರುಷರಿಗೆ ಸಮಾನರಾಗಿ ದುಡಿಯುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಉನ್ನತಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಆಟೋ ರಿಕ್ಷಾ ಚಾಲಕಿ ಜಯಂತಿ ಮಾತನಾಡಿ ಸ್ತ್ರೀ ಬದುಕಿನಲ್ಲಿ ದುಡಿದು ಎಲ್ಲಾ ಕ್ಷೇತ್ರದಲ್ಲೂ ಸೈ ಎನ್ನಿಸಿಕೊಳ್ಳಬಹುದು. ಇದಕ್ಕೆ ನಾನೇ ಸಾಕ್ಷಿ ಎಂದು ತನ್ನ ದುಡಿಮೆ ಕಾಯಕದ ಅನುಭವ ಹಂಚಿಕೊಂಡರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗಂಗಮ್ಮ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್, ಸಾಸ್ತಾನ ರೋಟರಿ ಅಧ್ಯಕ್ಷ ಮನೋಜ್, ವಿಕಾಸ ಕೇಂದ್ರದ ಸದಸ್ಯರು, ತರಬೇತಿ ಪಡೆದುಕೊಳ್ಳುವ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಜಯಲಕ್ಷ್ಮೀ ಸ್ವಾಗತಿಸಿ, ನಿರ್ಮಲಾ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!