Wednesday, September 25, 2024
Wednesday, September 25, 2024

ಪಂಚವರ್ಣ ಪರಿಸರ ಜಾಗೃತಿ ಪ್ರಬಂಧ ಸ್ಪರ್ಧೆ

ಪಂಚವರ್ಣ ಪರಿಸರ ಜಾಗೃತಿ ಪ್ರಬಂಧ ಸ್ಪರ್ಧೆ

Date:

ಕೋಟ: ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲದ ಇದರ ನೇತೃತ್ವದಲ್ಲಿ ರಜತ ಮಹೋತ್ಸವದ ಅಂಗವಾಗಿ ಕೋಟ ಹೋಬಳಿ ಮಟ್ಟದ ಪರಿಸರ ಜಾಗೃತಿಯ ಪ್ರಬಂಧ ಸ್ಪರ್ಧೆ ನಡೆಯಿತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ಮಟ್ಟದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದು ಅದರಂತೆ ಪ್ರಬಂಧ ಸ್ಪರ್ಧೆಯಲ್ಲಿ ಒಟ್ಟು 29 ಶಾಲೆಗಳ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಪ್ರಥಮ ಬಹುಮಾನ ಪ್ರಾಥಮಿಕ ವಿಭಾಗದಲ್ಲಿ ಕೋಟತಟ್ಟು ಪಡುಕರೆ ಮೈತ್ರಿ, ದ್ವಿತೀಯ ಶಾಂಭವೀ ಶಾಲೆ ಗಿಳಿಯಾರು ಪ್ರಥಮ್ ಕೆ, ತೃತೀಯ ಬಹುಮಾನ ಚಿತ್ರಪಾಡಿ ಶಾಲೆಯ ಅಮೃತಾ, ಪ್ರೌಢಶಾಲಾ ವಿಭಾಗದಲ್ಲಿ ವಿವೇಕ ಬಾಲಕಿಯರ ವಿಭಾಗದ ಕೇಶವ ಉಪಾಧ್ಯ, ದ್ವಿತೀಯ ಬಹುಮಾನ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ಇದರ ಪ್ರಗತಿ, ತೃತೀಯ ಗುಂಡ್ಮಿ ಪ್ರೌಢಶಾಲೆಯ ಸ್ನೇಹ ಆಯ್ಕೆಯಾಗಿ ಪ್ರಮಾಣಪತ್ರ ಹಾಗೂ ನಗದು ಬಹುಮಾನವನ್ನು ಸದ್ಭಾವನಾ ಕಾರ್ಯಕ್ರಮದಲ್ಲಿ ನೀಡಲಾಯಿತು.

ಭಾಗವಹಿಸಿದ ಶಾಲೆಗಳ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರವನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!