Monday, September 23, 2024
Monday, September 23, 2024

ತೆಂಕನಿಡಿಯೂರು ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಉದ್ಯೋಗ ಮಾಹಿತಿ ಘಟಕ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಒಂದು ದಿನದ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್‌ ರೈ ಕೆ, ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳುವ ಮೂಲಕ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಹೊಸಕಾಲದ ಕಂಪನಿಗಳಿಗೆ ಅಗತ್ಯವಾದ ಹೊಸ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಬೆಳವಣಿಗೆ ಸಾಧಿಸಬೇಕೆಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೌಶಲ್ಯ ತರಬೇತುದಾರರಾದ ನವೀನ್ ಕುಮಾರ್‌ ಅವರು ಸ್ವವಿವರ ಬರೆಯುವ ಬಗ್ಗೆ, ಸಂದರ್ಶನ ಎದುರಿಸುವ ಬಗ್ಗೆ ಮತ್ತು ಗುಂಪು ಚರ್ಚೆಯ ಬಗ್ಗೆ ಸುದೀರ್ಘವಾಗಿ ಅಂತಿಮ ವರ್ಷದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತರಬೇತಿ ನೀಡಿದರು.

ಇದು ಸ್ಪರ್ಧಾತ್ಮಕ ಯುಗ. ಈ ಯುಗದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳು ಕೌಶಲ್ಯಗಳನ್ನು ಕಲಿತು ಅದನ್ನು ಉದ್ಯೋಗ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡರೆ ಮುಂದೆ ಬರಬಹುದೆಂದು ಸಲಹೆ ನೀಡಿದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು.

ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ ಸ್ವಾಗತಿಸಿ, ಡಾ. ಎಚ್.ಕೆ. ವೆಂಕಟೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!