Sunday, September 22, 2024
Sunday, September 22, 2024

ಗ್ರಾಮೀಣ ಕ್ರೀಡಾಕೂಟ

ಗ್ರಾಮೀಣ ಕ್ರೀಡಾಕೂಟ

Date:

ಉಡುಪಿ: ನೆಹರು ಯುವ ಕೇಂದ್ರ, ಸಮೃದ್ಧಿ ಮಹಿಳಾ ಮಂಡಳಿ (ರಿ.) ಪೇತ್ರಿ, ಚೇರ್ಕಾಡಿ ಹಾಗೂ ಹೊಸಬೆಳಕು ಸೇವಾ ಟ್ರಸ್ಟ್ (ರಿ.) ರಂಗನಪಲ್ಕೆ, ಕಾರ್ಕಳ ಜಂಟಿ ಆಶ್ರಯದಲ್ಲಿ ತಾಲೂಕು ಯುವ ಮಂಡಲಿಗಳ ಗ್ರಾಮೀಣ ಕ್ರೀಡಾಕೂಟ ನಡೆಯಿತು.

ಸಾಹಿತಿ ಆರೂರು ಮಂಜುನಾಥ ರಾವ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಗ್ರಾಮೀಣ ಜನತೆಯೊಂದಿಗೆ ಆಶ್ರಮವಾಸಿಗಳಿಗೂ ಆಯೋಜಿಸಿರುವ ಕ್ರೀಡಾಕೂಟ ಉತ್ತಮ ಪರಿಕಲ್ಪನೆ ಎಂದರು. ಅಂಗವಿಕಲ ಹಾಗೂ‌ ಹಿರಿಯ ನಾಗರಿಕ ಇಲಾಖೆಯ ರತ್ನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಕಳ ಭೂ ನ್ಯಾಯ ಮಂಡಳಿಯ ಸದಸ್ಯರಾದ ವಿಕ್ರಮ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಆಶ್ರಮವಾಸಿಗಳನ್ನು ಮುಖ್ಯವಾಹಿನಿಯಲ್ಲಿ ಬೆರೆಯುವಂತೆ ಮಾಡಿದರೆ ಅವರಿಗೂ ಮರಳಿ ಜೀವನ ಲಭಿಸುವುದು ಎಂದರು.

ಸಮೃದ್ಧಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರಸನ್ನಾ ಪ್ರಸಾದ್ ಭಟ್, ಸಾಮಾಜಿಕ ಕಾರ್ಯಕರ್ತರಾದ ಜಗದೀಶ್ ತೆಂಡೂಲ್ಕರ್, ಸಂಪನ್ಮೂಲ ವ್ಯಕ್ತಿ ಉಮೇಶ್ ನಾಯಕ್, ಹೊಸಬೆಳಕು ಆಶ್ರಮದ ಸಂಸ್ಥಾಪಕರಾದ ವಿನಯಚಂದ್ರ, ತನುಲಾ ತರುಣ್, ಸಮಾಜ ಸೇವಕಿ ಗೌತಮಿ, ಗೌರೀಶ್ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಬೈಲೂರಿನ ಜಿ. ಹೆಚ್. ಪಿ .ಶಾಲೆಯ ದೈಹಿಕ ಶಿಕ್ಷಕಿಯರಾದ ಸಂಧ್ಯಾ ಹಾಗೂ ಜಯಲಕ್ಷ್ಮಿ ಸಹಕರಿಸಿದರು. ಮಲ್ಲಿಕಾ ಹರೀಶ್ ಶೆಟ್ಟಿ ಸ್ವಾಗತಿಸಿ ವಿನಯಚಂದ್ರ ವಂದಿಸಿದರು. ವನಿತಾ ಪಿ. ಶೆಟ್ಟಿ ಹಾಗೂ ಸಹನಾ ಕೆ. ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!