Thursday, June 11, 2026
Thursday, June 11, 2026

ಮಣಿಪಾಲ- ವಿವಿಧ ಕಡೆಗಳಲ್ಲಿ ತಂಬಾಕು ನಿಯಂತ್ರಣ ದಳದ ದಾಳಿ; ತಂಬಾಕು ಉತ್ಪನ್ನ ವಶ

ಮಣಿಪಾಲ- ವಿವಿಧ ಕಡೆಗಳಲ್ಲಿ ತಂಬಾಕು ನಿಯಂತ್ರಣ ದಳದ ದಾಳಿ; ತಂಬಾಕು ಉತ್ಪನ್ನ ವಶ

Date:

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 5, 6(ಎ), 6(ಬಿ) ಮತ್ತು 7 ಅಡಿಯಲ್ಲಿ 28 ಪ್ರಕರಣ ದಾಖಲಿಸಿ 6,400 ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಹಿರಿಯ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸತೀಶ್ ರಾವ್, ದೇವಪ್ಪ ಪಟಗಾರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕದ ಎಫ್.ಎಲ್.ಸಿ ರಾಜೇಶ್, ರಾಷ್ಟ್ರ‍ೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಮಣಿಪಾಲ ಪೊಲೀಸ್ ಠಾಣೆಯ ಆರಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾರಕೂರು: ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಅಂಕುರ’ ಓರಿಯಂಟೇಶನ್ ಕಾರ್ಯಕ್ರಮ

ಬಾರಕೂರು, ಜೂ.10: ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜು ಬಾರಕೂರಿನಲ್ಲಿ 2026-27ನೇ ಶೈಕ್ಷಣಿಕ...

ಶ್ರೀ ಕೃಷ್ಣ ಮಠ: ಪ್ರಧಾನಿ ಹೆಸರಿನಲ್ಲಿ ವಿಶೇಷ ಪೂಜೆ

ಉಡುಪಿ, ಜೂ,10: ದಾಖಲೆಯ 4339‌ನೇ ದಿನವನ್ನು ಪೂರೈಸಿದ, ಸತತವಾಗಿ 12 ವರ್ಷಗಳ...

ಕಾಪು: ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

ಕಾಪು, ಜೂ.೧೦: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

ಮೋದಿ ದಾಖಲೆ ಆಡಳಿತ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೊಡವೂರು, ಜೂ.10: ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕೊಡವೂರು...
error: Content is protected !!