Friday, September 20, 2024
Friday, September 20, 2024

ರೋಟರಿ ಉಡುಪಿ- ಭೌತಿಕ ವಿಕಸನ ಕಾರ್ಯಾಗಾರ

ರೋಟರಿ ಉಡುಪಿ- ಭೌತಿಕ ವಿಕಸನ ಕಾರ್ಯಾಗಾರ

Date:

ಉಡುಪಿ: ರೋಟರಿ ವಲಯ 4ರ ಸುಮಾರು 20ಕ್ಲಬ್ ಗಳ ಇಂಟರಾಕ್ಟ ಸದಸ್ಯರಿಗೆ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಒಂದು ದಿನದ ಭೌತಿಕ ವಿಕಸನ ಕಾರ್ಯಗಾರ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳರು ಮಾತನಾಡುತ್ತಾ, ಶ್ರೀ ದೇವಿಯ ಆವರಣದಲ್ಲಿ ಮಕ್ಕಳಿಗೆ ನಡೆಸುವ ಇಂತಹ ಕಾರ್ಯಾಗಾರಗಳು ಅದ್ಭುತ ಪರಿಣಾಮವನ್ನುಂಟು ಮಾಡುತ್ತವೆ.

ಜಗತ್ತಿನಲ್ಲಿ ಪೋಲಿಯೊ ನಿರ್ಮೂಲನೆಯಲ್ಲಿ ಮಹತ್ವದ ಪಾತ್ರ ವಹಿಸಿದ ರೋಟರಿಯು, ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಅಭಿನಂದನೀಯ ಮತ್ತು ಇದರ ಸಂಪೂರ್ಣ ಉಪಯೋಗ ಪಡೆಯಿರೆಂದು ಕರೆನೀಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ಅತಿಥಿಗಳಾಗಿ ಡಯಟ್ ನ ಉಪಪ್ರಾಂಶುಪಾಲ ಡಾ. ಅಶೋಕ ಕಾಮತ್, ಕೆಎಂಸಿ ಮಣಿಪಾಲದ ಡಾ. ಅಶ್ವಿನಿ ಕುಮಾರ್, ಡಯಟ್ ನ ಪ್ರಾಧ್ಯಾಪಕ ಯೋಗನರಸಿಂಹ, ಮನಃಶಾಸ್ತ್ರಜ್ಞ ಡಾ. ವಿರೂಪಾಕ್ಷ ದೇವರಮನೆ, ಕೋಟ ವಿವೇಕ ಪದವಿಪೂರ್ವ ಕಾಲೇಜಿನ ನರೇಂದ್ರ ಕುಮಾರ್ ಮಾಅರ್ಗದರ್ಶನ ನೀಡಿದರು.

ಯುವಸೇವಾ ನಿರ್ದೇಶಕ ಜನಾರ್ದನ ಭಟ್, ಇಂಟರಾಕ್ಟ ಸಭಾಪತಿ ಪದ್ಮಿನಿ ಭಟ್ ಮತ್ತು ಇತರ ರೋಟರಿ ಸದಸ್ಯರು ಉಪಸ್ಥಿತರಿದ್ದರು. ಸಹಾಯಕ ಗವರ್ನರ್ ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿ, ಕಾರ್ಯದರ್ಶಿ ಗುರುರಾಜ್ ಭಟ್ ವಂದಿಸಿದರು. ಅನಂತರಾಮ ಬಲ್ಲಾಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!