Saturday, September 21, 2024
Saturday, September 21, 2024

ಪುರುಷರ ಕ್ರಿಕೆಟ್- ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿಗೆ ಲೆಸ್ಲಿ ಮೆಮೋರಿಯಲ್ ರೋಲಿಂಗ್ ಟ್ರೋಫಿ

ಪುರುಷರ ಕ್ರಿಕೆಟ್- ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿಗೆ ಲೆಸ್ಲಿ ಮೆಮೋರಿಯಲ್ ರೋಲಿಂಗ್ ಟ್ರೋಫಿ

Date:

ಬ್ರಹ್ಮಾವರ: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಎಸ್.ಎಂ.ಎಸ್ ಕ್ರೀಡಾಂಗಣದಲ್ಲಿ ಶಿರ್ವ ಲೆಸ್ಲಿ ಡಿಸೋಜ ಮೆಮೋರಿಯಲ್ ರೋಲಿಂಗ್ ಟ್ರೋಫಿಗಾಗಿ ನಡೆದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಟದಲ್ಲಿ ಎಸ್.ಎಂ.ಎಸ್ ಕಾಲೇಜಿನ ಪುರುಷರ ಕ್ರಿಕೆಟ್ ತಂಡ ಎಂ.ಪಿ.ಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ತಂಡದ ವಿರುದ್ಧ ಗೆಲುವನ್ನು ಸಾಧಿಸಿ ಸತತ ಎರಡನೇ ಬಾರಿಗೆ ಶಿರ್ವ ಲೆಸ್ಲಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ.

ಎಸ್.ಎಂ.ಎಸ್ ತಂಡದ ಸಾಗರ್ ಬಾಲಕೃಷ್ಣ ನಾಯ್ಕ್ ಇವರಿಂದ ಕೂಟದ ಏಕೈಕ ಶತಕ ದಾಖಲಾಯಿತು. ಉತ್ತಮ ಬ್ಯಾಟ್ಸ್ ಮನ್ ಆಗಿ ಎಂ.ಪಿ.ಎಂ ಕಾಲೇಜು ಕಾರ್ಕಳದ ಅಜಿತ್ ಆಯ್ಕೆಯಾದರು. ಉತ್ತಮ ಬೌಲರ್ ಎಸ್.ಎಂ.ಎಸ್ ತಂಡದ ನಿತೀಶ್ ಶೆಟ್ಟಿ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಎಸ್.ಎಂ.ಎಸ್ ಕಾಲೇಜಿನ ಇಮ್ರಾನ್ ನಜೀರ್ ಪಡೆದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಓ.ಎಸ್.ಸಿ ಎಜುಕೇಶನಲ್ ಸೊಸೈಟಿ ಇದರ ಅಧ್ಯಕ್ಷರಾದ ರೆ.ಫಾ. ಎಂ ಸಿ ಮಥಾಯ್, ಪ್ರಧಾನ ಕಾರ್ಯದರ್ಶಿ ಅನಿಲ್ ಬಿ ರೋಡ್ರಿಗಸ್, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಉಪನಿರ್ದೇಶಕರಾದ ಪ್ರಸನ್ನ ಬಿ.ಕೆ., ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಕೆ., ಕಾಲೇಜು ವಿಭಾಗದ ಕಾರ್ಯದರ್ಶಿಯವರಾದ ಸಿರಿಲ್ ಪಿ ಡಿಸೋಜಾ, ಖಜಾಂಚಿ ಸ್ಯಾಮ್ಸನ್ ಡಿಸೋಜಾ ಹಾಗೂ ಸದಸ್ಯರಾದ ಲವೀನಾ ಲೂಯಿಸ್ ಹಾಗೂ ಕ್ಲೆಮೆಂಟ್ ಡಿಸೋಜಾ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ ಭಟ್ ಉಪಸ್ಥಿತರಿದ್ದರು. ವಿಜೇತರಿಗೆ ಓ.ಎಸ್.ಸಿ ಎಜುಕೇಶನಲ್ ಸೊಸೈಟಿಯ ವತಿಯಿಂದ ನಗದು ಬಹುಮಾನ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!