Saturday, September 21, 2024
Saturday, September 21, 2024

ಬ್ರಹ್ಮಾವರ- ಶಾಲಾ ವಠಾರಕ್ಕೆ ನುಗ್ಗಿದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ

ಬ್ರಹ್ಮಾವರ- ಶಾಲಾ ವಠಾರಕ್ಕೆ ನುಗ್ಗಿದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ

Date:

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯ ನಡೂರಿನ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿ ಭಯದ ವಾತಾವರಣ ನಿರ್ಮಿಸಿದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ದೊಡ್ಡಣಗುಡ್ಡೆಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಬೊಬ್ಬೆ ಹೊಡೆಯುತ್ತಾ ಕಬ್ಬಿಣದ ಸಲಾಕೆ ಹಿಡಿದು ಶಾಲಾ ವಠಾರಕ್ಕೆ ನುಗ್ಗಿದಾಗ ಬೆದರಿದ ಮಕ್ಕಳು ಭೀತಿಗೊಳಗಾದರು. ಶಾಲಾ ಸಿಬ್ಬಂದಿಗಳು ಮಹಿಳೆಯಿಂದ ತೊಂದರೆಯಾಗದಂತೆ ತಡೆಯಲು ಹರಸಾಹಸ ಪಟ್ಟಿದ್ದಾರೆ.
ಮಹಿಳೆಯು ಸ್ಥಳೀಯ ನಿವಾಸಿಯಾಗಿದ್ದು ವಿವಾಹಿತರಾಗಿದ್ದಾರೆ. ಒಂದು ಮಗುವಿದೆ. ಪತಿ ಬೇರೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿರುವ ಮಹಿಳೆಗೆ ಸೂಕ್ತ ಔಷದೋಪಚಾರ ನಡೆಸಲು ತೀರಾ ಬಡತನದಲ್ಲಿರುವ ವೃದ್ಧ ತಂದೆ ತಾಯಿಗೆ ಸಾಧ್ಯವಾಗಿಲ್ಲ. ಹೀಗಾಗಿ ಮಹಿಳೆಯ ಅನಾರೋಗ್ಯ ಉಲ್ಬಣಗೊಂಡಿದೆ. ಮಗುವಿನ ಭವಿಷ್ಯದ ದೃಷ್ಟಿಯಿಂದ ಮಹಿಳೆ ಗುಣಮುಖವಾಗುವುದು ಅತ್ಯಗತ್ಯವಾಗಿದೆ. ಸೂಕ್ತ ಔಷದೋಪಾಚಾರದೊಡನೆ ಆರೈಕೆಯ ಅಗತ್ಯವೂ ಇದೆ. ಆದರೆ ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ ಇವೆಲ್ಲವನ್ನೂ ಭರಿಸುವ ಶಕ್ತಿಯಿಲ್ಲ. ಹೀಗಾಗಿ ಸಂಬಂಧಪಟ್ಟವರು ಹಾಗೂ ಸಂಬಂಧಪಟ್ಟ ಇಲಾಖೆಗಳು ಮಹಿಳೆಯ ನೆರವಿಗೆ ಮುಂದಾಗಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಉಡುಪಿ ಸಖಿ ಸೆಂಟರ್‌ನ ಸಿಬ್ಬಂದಿಗಳು ವಿಶು ಶೆಟ್ಟಿ ಅವರೊಂದಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!