Thursday, September 19, 2024
Thursday, September 19, 2024

ಯುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ: ನ್ಯಾ. ಶಾಂತವೀರ ಶಿವಪ್ಪ

ಯುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ: ನ್ಯಾ. ಶಾಂತವೀರ ಶಿವಪ್ಪ

Date:

ಉಡುಪಿ, ಜನವರಿ 25: ಭಾರತೀಯ ಪ್ರಜೆಯಾಗಿ ಹದಿನೆಂಟು ವರ್ಷ ತುಂಬಿದ ಅರ್ಹ ಯುವ ಮತದಾರರು ತಮ್ಮ ಹೆಸರನ್ನು ತಪ್ಪದೇ ಮತದಾನ ಪಟ್ಟಿಯಲ್ಲಿ ನೋಂದಾಯಿಸುವುದರೊಂದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.

ಅವರು ಬುಧವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಉಡುಪಿ ಜಿಲ್ಲೆ ಇವರ ವತಿಯಿಂದ ಅಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳನ್ನು ಪ್ರಜೆಗಳೇ, ಅಯ್ಕೆ ಮಾಡುವ ಅವಕಾಶವಿದೆ. ಜನಪ್ರತಿನಿಧಿಗಳನ್ನು ಆರಿಸುವಾಗ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಘೋಷಿಸುವ ಯಾವುದೇ ಆಸೆ-ಆಮೀಷಗಳಿಗೆ ಒಳಗಾಗದೇ ಉತ್ತಮ ಸರಕಾರವನ್ನು ನಡೆಸುವ ಜನಪ್ರತಿನಿಧಿಗಳನ್ನು ಆರಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು. ವಯಸ್ಕರಾದ ತಕ್ಷಣ ಸರಕಾರಿ ವ್ಯವಸ್ಥೆಯಲ್ಲಿ ಒಂದನೇಯದಾಗಿ ಮತದಾನ ಮಾಡುವ ಹಕ್ಕು, ಎರಡನೆಯದಾಗಿ ವಾಹನ ಚಾಲನಾ ಪರವಾನಿಗೆ ಪತ್ರ ಲಭಿಸುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮತದಾರರ ದಿನಾಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿಯಾದ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಿದ್ಧಲಿಂಗಪ್ಪ, ತಹಶೀಲ್ದಾರ್ ಜೆ ಮಹೇಶ್, ಕುಂದಾಪುರ ಉಪ ವಿಭಾಗಾಧಿಕಾರಿ ಕೆ ರಾಜು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!