Friday, September 20, 2024
Friday, September 20, 2024

ಸಾಮರ್ಥಾಭಿವೃದ್ಧಿ ತರಬೇತಿಯಿಂದ ಸಂಜೀವಿನಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ

ಸಾಮರ್ಥಾಭಿವೃದ್ಧಿ ತರಬೇತಿಯಿಂದ ಸಂಜೀವಿನಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ

Date:

ಮಣಿಪಾಲ, ಫೆ. 7: ಸಾಮರ್ಥಾಭಿವೃದ್ಧಿ ತರಬೇತಿಯಿಂದ ಸಂಜೀವಿನಿ ಯೋಜನೆಯು ಧ್ಯೇಯೋದ್ದೇಶಕ್ಕೆ ಅನುಗುಣವಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ನವೀನ್ ಕುಮಾರ್ ಎಚ್ ಡಿ ಹೇಳಿದರು. ಜಿಲ್ಲಾ ಸಂಪನ್ಮೂಲ ಕೇಂದ್ರ, ಜಿಲ್ಲಾ ಪಂಚಾಯತ್ ರಜತಾದ್ರಿ ಮಣಿಪಾಲ ಇಲ್ಲಿ ಹಮ್ಮಿಕೊಂಡ 5 ದಿನಗಳ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಮಹಿಳಾ ಸಬಲೀಕರಣದ ಬಗ್ಗೆ ಮನಮುಟ್ಟುವಂತೆ ತರಬೇತಿ ನೀಡಲು ಓರ್ವ ಸ್ವ ಸಹಾಯ ಗುಂಪಿನ ಮಹಿಳೆಯಿಂದ ಮಾತ್ರ ಸಾಧ್ಯ ಎಂದು ಸ್ವ ಸಹಾಯ ಗುಂಪುಗಳಿಂದಲೇ ತಾಲೂಕು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ತರಬೇತಿಯಲ್ಲಿ ಹಾಗೂ ಸ್ವ ಸಹಾಯ ಗುಂಪುಗಳ ತರಬೇತಿ ನಡೆಸುವಾಗ ಕೂಡ ಶೃದ್ಧೆ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಸಂಜೀವಿನಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜ್ ಗುಪ್ತ, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಉಪಸ್ಥಿತರಿದ್ದರು. ಶಿಬಿರಾರ್ಥಿ ಲೋಲಾಕ್ಷಿ ಪ್ರಾರ್ಥನೆ ಹಾಡಿದರು. ಯುವ ವೃತ್ತಿಪರರಾದ ಸಮಂತ್ ಸ್ವಾಗತಿಸಿ, ಯುವ ವೃತ್ತಿಪರರಾದ ಜಯಮಾಲಾ ವಂದಿಸಿದರು. ಜಿಲ್ಲಾ ವ್ಯವಸ್ಥಾಪಕರಾದ ನವ್ಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!