Monday, February 24, 2025
Monday, February 24, 2025

ಗ್ರಾಮೀಣಾಭಿವೃದ್ಧಿ ಪರಿಕಲ್ಪನೆ ಸಾಕಾರಗೊಳಿಸುತ್ತಿರುವ ಯುವಕ ಮಂಡಲ ಸಾಣೂರು

ಗ್ರಾಮೀಣಾಭಿವೃದ್ಧಿ ಪರಿಕಲ್ಪನೆ ಸಾಕಾರಗೊಳಿಸುತ್ತಿರುವ ಯುವಕ ಮಂಡಲ ಸಾಣೂರು

Date:

ಕಾರ್ಕಳ: ಗ್ರಾಮಗಳಲ್ಲಿರುವ ಸಂಘ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಇದಕ್ಕೆ ಉತ್ತಮ ಉದಾಹರಣೆ ಎಂಬಂತೆ ಯುವಕ ಮಂಡಲ ಸಾಣುರು ಸ್ಥಳೀಯ ಜನರನ್ನು ಒಗ್ಗೂಡಿಸಿ ಗ್ರಾಮದ ಏಳಿಗೆಗಾಗಿ ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದೆ.

ಗ್ರಾಮೀಣಾಭಿವೃದ್ಧಿ ಪರಿಕಲ್ಪನೆ ಸಾಕಾರಗೊಳಿಸಲು ಯುವಕ ಮಂಡಲ ಸಾಣೂರು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಹಲವಾರು ದಶಕಗಳಿಂದ ಕ್ರಿಯಾಶೀಲ ಪ್ರಯತ್ನ ನಡೆಸುತ್ತಿದೆ.

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಸ್ವಚ್ಛ ಸಾಣೂರು ತಂಡದಿಂದ ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂಭ್ರಮದ ಪ್ರಯುಕ್ತ ಕ್ಲೀನ್ ಇಂಡಿಯಾ ಪ್ಲಾಸ್ಟಿಕ್ ಮುಕ್ತ ಪ್ರದೇಶ ಕಾರ್ಯಕ್ರಮದಡಿ ಪ್ರತಿ ಆದಿತ್ಯವಾರ ಸ್ವಚ್ಚತಾ ಸಾಪ್ತಾಹಿಕ ಸ್ವಚ್ಛತಾ ಆಂದೋಲನ ನಡೆಯುತ್ತಿದೆ.

ಹದಿಮೂರನೇ ವಾರದ ಸ್ವಚ್ಛತಾ ಸಾಪ್ತಾಹಿಕ: ಪುಲ್ಕೇರಿ ಬೈಪಾಸ್ ಮಠದಕೆರೆಯಿಂದ ಕುಂಟಲ್ಪಾಡಿವರೆಗೆ 13ನೇ ವಾರದ ಸ್ವಚ್ಛತಾ ಅಭಿಯಾನ ನಡೆಯಿತು.

ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಮಹೇಶ್ ಕುಮಾರ್, ಜಗದೀಶ್ ಕುಮಾರ್, ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ, ಪದಾಧಿಕಾರಿಗಳಾದ ಪ್ರಸನ್ನ ಆಚಾರ್ಯ, ಜಿತೇಶ್ ರಾವ್, ಸುಮಂತ್, ಸುದರ್ಶನ್ ನಾಯ್ಕ್, ಸುಧಾಕರ್, ಸಂಪತ್, ಸಂದೀಪ್ ಆಚಾರ್ಯ, ವಿದ್ಯಾನಂದ್ ಕೋಟ್ಯಾನ್, ಅಭಿಷೇಕ್, ಸದಾನಂದ ಪೂಜಾರಿ, ವಿಗ್ನೇಶ್ ಮೊದಲಾದವರು ಭಾಗವಹಿಸಿದರು. ಸುಮಾರು 7 ಚೀಲ ತ್ಯಾಜ್ಯಗಳನ್ನು ಅಭಿಯಾನದ ಮೂಲಕ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!