Home ಸುದ್ಧಿಗಳು ಪ್ರಾದೇಶಿಕ ಅಬ್ಬನಡ್ಕದಿಂದ ಮಂಜರಪಲ್ಕೆ ಸಂಪರ್ಕಿಸುವ ರಸ್ತೆಗೆ ಮರು ಡಾಮರೀಕರಣಕ್ಕಾಗಿ ಸಚಿವರಿಗೆ ಮನವಿ

ಅಬ್ಬನಡ್ಕದಿಂದ ಮಂಜರಪಲ್ಕೆ ಸಂಪರ್ಕಿಸುವ ರಸ್ತೆಗೆ ಮರು ಡಾಮರೀಕರಣಕ್ಕಾಗಿ ಸಚಿವರಿಗೆ ಮನವಿ

280
0

ಉಡುಪಿ, ಫೆ. 24: ಅಬ್ಬನಡ್ಕ– ಇಟ್ಟಮೇರಿ ಕೂಡು ರಸ್ತೆಯಿಂದ ಮಂಜರಪಲ್ಕೆ ಸಂಪರ್ಕಿಸುವ ರಸ್ತೆಗೆ ಮರು ಡಾಮರೀಕರಣ ನಡೆಸುವಂತೆ ಆಗ್ರಹಿಸಿ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನೇತೃತ್ವದಲ್ಲಿ ಜರಗಿದ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಮಹಾಶಿವರಾತ್ರಿ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು.

ಮನವಿಯಲ್ಲಿ ರಸ್ತೆ ವಿಸ್ತರಣೆ, ಸುವ್ಯವಸ್ಥಿತ ಚರಂಡಿ ವ್ಯವಸ್ಥೆ ಸೇರಿದಂತೆ ಅತ್ಯಂತ ಗುಣಮಟ್ಟದ ಡಾಮರೀಕರಣ ರಸ್ತೆ ನಿರ್ಮಿಸಿಕೊಡಬೇಕಾಗಿ ಮನವಿಯಲ್ಲಿ ಆಗ್ರಹಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಫ್ರೆಂಡ್ಸ್ ಕ್ಲಬ್‌ನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ರಘುವೀರ್ ಶೆಟ್ಟಿ, ಸುರೇಶ್ ಕಾಸ್ರಬೈಲು, ರಾಜೇಶ್ ಕೊಟ್ಯಾನ್, ಅಬ್ಬನಡ್ಕ ಸತೀಶ್ ಪೂಜಾರಿ, ಉದಯ ಅಂಚನ್, ಕಾರ್ಯದರ್ಶಿ ಲಲಿತಾ ಆಚಾರ್ಯ ಮೊದಲಾದವರು ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.