Sunday, September 22, 2024
Sunday, September 22, 2024

ಕೆ.ಎಂ.ಸಿ ಮಣಿಪಾಲ: ‘ಯುವೈಟಿಸ್ ಪೇ ಚರ್ಚಾ’ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಕೆ.ಎಂ.ಸಿ ಮಣಿಪಾಲ: ‘ಯುವೈಟಿಸ್ ಪೇ ಚರ್ಚಾ’ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

Date:

ಮಣಿಪಾಲ, ಮಾ.1: ನೇತ್ರಶಾಸ್ತ್ರ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ, ಮಣಿಪಾಲ, ಯುವೈಟಿಸ್ ಸೊಸೈಟಿ ಆಫ್ ಇಂಡಿಯಾ, ಕರ್ನಾಟಕ ಆಫ್ತಾಲ್ಮಿಕ್ ಸೊಸೈಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಆಫ್ತಾಲ್ಮಿಕ್ ಸೊಸೈಟಿ ಸಹಯೋಗದೊಂದಿಗೆ ‘ಯುವೈಟಿಸ್ ಪೇ ಚರ್ಚಾ’ ಎನ್ನುವ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಆಯೋಜಿಸಿತ್ತು. ಕೆಎಂಸಿ, ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕೆಎಂಸಿ, ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ ಉದ್ಘಾಟಿಸಿದರು. ರೋಗಿಗಳ ಆರೈಕೆಯನ್ನು ಸುಧಾರಿಸುವಲ್ಲಿ ಉಪವಿಭಾಗಗಳ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವೈಟಿಸ್ ನಿರ್ವಹಣೆಯ ಪ್ರಗತಿಯನ್ನು ಶ್ಲಾಘಿಸಿದರು.

ಯುವೈಟಿಸ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿ ಡಾ. ಸುದರ್ಶನ್ ಎಸ್, ಕರ್ನಾಟಕ ಆಫ್ತಾಲ್ಮಿಕ್ ಸೊಸೈಟಿ ಅಧ್ಯಕ್ಷ ಡಾ. ಕೃಷ್ಣಪ್ರಸಾದ್ ಕೂಡ್ಲು, ಉಡುಪಿ ಜಿಲ್ಲಾ ಆಫ್ತಾಲ್ಮಿಕ್ ಸೊಸೈಟಿ ಅಧ್ಯಕ್ಷ ಡಾ. ಶ್ರೀನಾಥ್ ಕಾಮತ್ ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ಶಿರನ್ ಶೆಟ್ಟಿ ಗೌರವ ಅಥಿತಿಗಳಾಗಿದ್ದರು.

ನೇತ್ರವಿಜ್ಞಾನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಹಾಗೂ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಂಘಟನಾ ಅಧ್ಯಕ್ಷ ಡಾ. ಯೋಗೀಶ್ ಎಸ್ ಕಾಮತ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ. ಸೌಮ್ಯ ಎಸ್ ವಂದಿಸಿದರು. ಭಾರತದ ಪ್ರಖ್ಯಾತ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಯುವೈಟಿಸ್ ನ ವಿವಿಧ ಅಂಶಗಳ ಕುರಿತು ಮಾತನಾಡಿದರು. ಕರ್ನಾಟಕದ ನೇತ್ರ ತಜ್ಞರುಗಳು ಮತ್ತು ಕರ್ನಾಟಕದ ವಿವಿಧ ಕಾಲೇಜುಗಳ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

ಓಇಯು ಅಲುಮ್ನಿ ರೋಲಿಂಗ್ ಟ್ರೋಫಿಯನ್ನು ಚರ್ಚಾ ಸ್ಪರ್ಧಾ ವಿಜೇತೆ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗದ ಡಾ. ಕೃತಿಕಾ ರೆಡ್ಡಿ ಅವರಿಗೆ ಡಾ.ಲಾವಣ್ಯ ರಾವ್ ಹಸ್ತಾಂತರಿಸಿದರು. 13 ತಂಡಗಳು ಭಾಗವಹಿಸಿದ್ದ ಅತ್ಯಾಕರ್ಷಕ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ಡಾ. ಶ್ರೀಯಾ ಮತ್ತು ಡಾ. ಹರ್ಷಿತ್ ವಿಜೇತರಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!