Home ಸುದ್ಧಿಗಳು ಪ್ರಾದೇಶಿಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ: ಸುಮಿತ್ರಾ ಆರ್ ನಾಯಕ್

ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ: ಸುಮಿತ್ರಾ ಆರ್ ನಾಯಕ್

529
0

ಉಡುಪಿ, ಮಾ. 4: ಪ್ರತಿದಿನ ಗ್ರಂಥಾಲಯಕ್ಕೆ ಬರುವ ಸಾರ್ವಜನಿಕ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಉಡುಪಿ ಜಿಲ್ಲೆಯ ನಾಗರೀಕರು ಮತ್ತು ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಉಡುಪಿ ನಗರ ಕೇಂದ್ರ ಗ್ರಂಥಾಲಯವು ಸಾರ್ವಜನಿಕ ಓದುಗರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಉಡುಪಿ ನಗರಸಭೆ ಆಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಉಡುಪಿ ನಗರ ಕೇಂದ್ರ ಗ್ರಂಥಾಲಯಕ್ಕೆ ಉಪಯೋಗವಾಗುವಂತೆ, ಪುಸ್ತಕಗಳನ್ನು ಇಡುವ ಡಬಲ್ ರ‍್ಯಾಕ್‌ಗಳನ್ನು ವಯಕ್ತಿಕವಾಗಿ ಕೊಡುಗೆ ನೀಡಿ ಮಾತನಾಡಿದರು. ನಗರಸಭಾ ಸದಸ್ಯೆ ರಶ್ಮಿಚಿತ್ತರಂಜನ್ ಭಟ್, ಮಕ್ಕಳಿಗಾಗಿ 50 ಹೊಸ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯ ಪಿತಾಮಹ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ, ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಈ ರೀತಿ ಗ್ರಂಥಾಲಯಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಇತರರಿಗೆ ಮಾದರಿ ಎಂದರು. ಇಲ್ಲಿನ ಜನತೆ ಸುಸಂಸ್ಕೃತರು ಮತ್ತು ಪ್ರಜ್ಞಾವಂತರು. ಪುಸ್ತಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ. ಪುಸ್ತಕ ಸಂಸ್ಕೃತಿ ಬೆಳೆಸಲು ಇಂತಹ ಅತ್ಯುತ್ತಮ ಪೀಠೋಪಕರಣ, ಪುಸ್ತಕಗಳನ್ನು ಕೊಡುಗೆ ನೀಡುವುದರ ಮೂಲಕ ಗ್ರಂಥಾಲಯದ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು.

ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ರಾಘವೇಂದ್ರ , ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರಿನ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿಯ ಜಯಶ್ರೀ ಎಂ., ಇವರು ಉಪಸ್ಥಿತರಿದ್ದರು. ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಾಲಯ ಸಹಾಯಕರಾದ ಸುನೀತಾ ಬಿ.ಎಸ್ ಪ್ರಾರ್ಥಿಸಿದರು. ಪ್ರಥಮ ದರ್ಜೆ ಸಹಾಯಕರಾದ ಶಕುಂತಳ ಕುಂದರ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.