Monday, February 24, 2025
Monday, February 24, 2025

ತನಿಖಾ ವರದಿ ಬಂದ ನಂತರ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ

ತನಿಖಾ ವರದಿ ಬಂದ ನಂತರ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ

Date:

ಉಡುಪಿ: ಕೋಟದಲ್ಲಿ ಸಂಭವಿಸಿದ ಘಟನೆಯ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರು, ಘಟನೆಗೆ ಸಂಬಂಧಿಸಿದಂತೆ ಎಸ್.ಐ ಸಹಿತ 6 ಪೊಲೀಸ್ ಸಿಬ್ಬಂದಿಗಳನ್ನು ಕೋಟ ಠಾಣೆಯಿಂದ ತನಿಖೆ ನಡೆಸುವ ಸಲುವಾಗಿ ಸ್ಥಳಾಂತರ ಮಾಡಲಾಗಿದೆ. ತನಿಖೆ ಮುಕ್ತಾಯಗೊಳ್ಳುವವರೆಗೂ ಅವರೆಲ್ಲರೂ ಕೋಟ ಠಾಣೆಯಲ್ಲಿ ಸೇವೆಯಲ್ಲಿರುವುದಿಲ್ಲ.

ಲೌಡ್ ಮ್ಯೂಸಿಕ್ ಕೇಳಿಬರುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬಳಿಕ ಕೋಟ ಠಾಣೆಯ ಪೊಲೀಸರು 10 ಗಂಟೆ ಆಗಿರುವ ಕಾರಣ ಮ್ಯೂಸಿಕ್ ಬಂದ್ ಮಾಡಲು ಸೂಚನೆ ನೀಡಿದ್ದರು.

ಅವಧಿ ಮೀರಿ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಕೋಟ ಠಾಣೆಗೆ ಮಾಹಿತಿ ನೀಡಿದಾಗ ಪಿ.ಎಸ್.ಐ ಸಿಬ್ಬಂದಿಗಳ ಜೊತೆಗೆ ಸ್ಥಳಕ್ಕೆ ತೆರಳಿದರು.

ಲಾಠಿ ಚಾರ್ಜ್ ಬಗ್ಗೆ ಕೊರಗ ಸಮುದಾಯದವರು ಆರೋಪ ಮಾಡಿದ್ದು ಇದರ ಬಗ್ಗೆ ಡಿ.ವೈ.ಎಸ್.ಪಿ ಅವರಿಗೆ ಸೂಕ್ತ ತನಿಖೆ ನಡೆಸಲು ತಿಳಿಸಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹೇಳಿದರು. ಎ.ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!